
ನವದೆಹಲಿ (ಆ.23): ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಕೆನೆ ಪದರದಡಿಯಲ್ಲಿ (creamy layer) ಬರುವ ವರ್ಗದವರ ವಾರ್ಷಿಕ ವರಮಾನವನ್ನು 6 ಲಕ್ಷದಿಂದ 8 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಓಬಿಸಿ ಕೆಟಗರಿಯಲ್ಲಿ ಬರುವ ಕೆನೆಪದರ ವರ್ಗದವರು ವಾರ್ಷಿಕ 8 ಲಕ್ಷ ರೂ ವರಮಾನ ಹೊಂದಿದ್ದರೂ ಮೀಸಲಾತಿ ಸೌಲಭ್ಯವನ್ನು ಪಡೆಯಲಿದ್ದಾರೆ ಎಂದು ಜೇಟ್ಲಿ ಹೇಳಿದ್ದಾರೆ.
ಕೇಂದ್ರ ಸರ್ಕಾರದ ದ್ಯೋಗಗಳಲ್ಲಿ ಓಬಿಸಿಯಲ್ಲಿ ಒಳ ವರ್ಗೀಕರಣ ಮಾಡುವ ಕುರಿತು, ಅದರ ಸಾಧಕ-ಬಾಧಕಗಳನ್ನು ಪರಿಶೀಲಿಸಲು ಆಯೋಗ ರಚಿಸಲು ಸಿವ ಸಂಪುಟ ಇಂದು ಅನುಮೋದನೆ ನೀಡಿದೆ. ಈಗಾಗಲೇ ಆಂಧ್ರಪ್ರದೇಶ, ತೆಲಂಗಾಣ, ಜಾರ್ಖಂಡ್, ಪಶ್ಚಿಮ ಬಂಗಾಳ ಸೇರಿದಂತೆ 11 ರಾಜ್ಯಗಳ ಸರ್ಕಾರಿ ಉದ್ಯೋಗಗಳಲ್ಲಿ ಇದು ಜಾರಿಯಲ್ಲಿದೆ. ಆದರೆ ಕೇಂದ್ರ ಸರ್ಕಾರದಲ್ಲಿ ಇದು ಜಾರಿಯಲ್ಲಿರಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.