
ಹೈದರಾಬಾದ್: ಗಣೇಶ ಚತುರ್ಥಿ ಸಂಭ್ರಮಾಚರಣೆ ಸಂದರ್ಭದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನ ಕುಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸಂಭ್ರಮಾಚರಣೆಯಲ್ಲಿ ಜನರೆಲ್ಲಾ ತಲ್ಲೀನರಾಗಿರುವ ಸಂದರ್ಭದಲ್ಲಿ ಗುಂಪಿನ ಮಧ್ಯೆ ನುಸುಳಿ ವ್ಯಕ್ತಿಯೊಬ್ಬ ಯುವತಿ ಹಾಗೂ ಮಹಿಳೆಯರನ್ನು ಕೆಟ್ಟದಾಗಿ ಸ್ಪರ್ಶಿಸುವುದು, ಹೈದರಾಬಾದ್ ಪೊಲೀಸರು ಇಟ್ಟಿರುವ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ.
ಹೈದರಾಬಾದ್ ಪೊಲೀಸರ ಶೀ ತಂಡವು ಇಂತಹ ಜನರನ್ನು ಪತ್ತೆಹಚ್ಚಲು ಕ್ಯಾಮೆರಾಗಳನ್ನು ವಿವಿಧ ಸ್ಥಳಗಳಲ್ಲಿ ಅಳವಡಿಸಿತ್ತು.
ಈ ಕ್ಯಾಮೆರಾ ದೃಶ್ಯಾವಳಿಗಳ ಆಧಾರದಲ್ಲಿ ಸುಮಾರು 30 ವ್ಯಕ್ತಿಗಳನ್ನು ಪೊಲೀಸರು ವಶಪಡಿಸಿದ್ದು, ಅವರಲ್ಲಿ ಸುಮಾರು 8 ಮಂದಿ ಅಪ್ರಾಪ್ತರಾಗಿದ್ದಾರೆಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.