
ಮಂಗಳೂರು(ಜು.08): ಬಂಟ್ವಾಳದಲ್ಲಿ ಆಕ್ರೋಶದ ಕಳಹೆ ಮೊಳಗಿದೆ. ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾಗಿದ್ದ ಶರತ್ ಮಡಿವಾಳ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು ಇಂದು ಅಂತ್ಯ ಕ್ರಿಯೆ ನಡೆಯಲಿದೆ .
ಜುಲೈ 4ರಂದು ಬಂಟ್ವಾಳದ ಬಿ. ಸಿ ರೋಡ್ ನಲ್ಲಿ ಬೈಕ್ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಶರತ್ ಮಡಿವಾಳ ಮೇಲೆ ತಲ್ವಾರ್ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ರು.. ಗಂಭೀರವಾಗಿ ಗಾಯಗೊಂಡಿದ್ದ ಶರತ್ನನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಆರ್ಎಸ್ಎಸ್ ಮುಖಂಡ ಕೊನೆಯುಸಿರೆಳೆದ್ದಾನೆ.
ಶರತ್ ಮೃತದೇಹ ಮಂಗಳೂರಿನ ಎಜೆ ಆಸ್ಪತ್ಪೆಯಲ್ಲಿದ್ದು ಇಂದು ಹುಟ್ಟೂರು ಬಂಟ್ವಾಳದ ಸಜಿಪದಲ್ಲಿ ನಡೆಯಲಿದೆ. ಆಸ್ಪತ್ರೆಯಿಂದ ಬೆಳಗ್ಗೆ 9.30ಕ್ಕೆ ಶರತ್ ಮೃತದೇಹವನ್ನು ಬಂಟ್ವಾಳದ ಬಿಸಿ ರೋಡ್ ಗೆ ತರಲಿದ್ದು ಕೆಲ ಕಾಲ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತೆ. ಬಳಿಕ ಅಲ್ಲಿಂದ ಶರತ್ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗುತ್ತೆ. ಮನೆ ಬಳಿ ಇರೋ ಗ್ರೌಂಡ್ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಶರತ್ ಅಂತ್ಯಕ್ರಿಯೆ ನಡೆಯಲಿದೆ.
ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕಾರ್ಯಕರ್ತರ ಆಕ್ರೋಶ ಭುಗೆಲೆದ್ದಿತು. ಆರ್ ಎಸ್ ಎಸ್ ಕಾರ್ಯಕರ್ತರ ಕೊಲೆ ಹಲ್ಲೆ ಖಂಡನೀಯ. ಇದೊಂದು ವ್ಯವಸ್ಥಿತವಾದ ಸಂಚು,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ RSS ನಾಯಕರ ಕೊಲೆಯಾಗುತ್ತಿವೆ ಅದರ ಬಗ್ಗೆ ತನಿಖೆಯಾಗಲಿ ಅಂತ ಆಕ್ರೋಶ ವ್ಯಕ್ತಪಡಿಸಿದ್ರು. ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟಿಸಿದವರ ವಿರುದ್ಧ ಕಾನೂನು ಕ್ರಮಕ್ಕೆ ಐಜಿಪಿ ಮುಂದಾಗಿದ್ದಾರೆ.. ಸದ್ಯಕ್ಕೆ ಕರಾವಳಿ ಬೂದಿ ಮುಚ್ಚಿದ ಕೆಂಡವಾಗಿದ್ದು ಕೋಮು ಸಂಘರ್ಷದ ಕಾವು ದಿನೇ ದಿನೇ ಬಿಸಿಏರುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.