
ತಿರುವನಂತಪುರಂ : ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಆಂಬುಲೆನ್ಸ್ ಚಾಲಕನ ದುಷ್ಕೃತ್ಯದಿಂದ ಜೀವ ಕಳೆದುಕೊಂಡಿದ್ದಾನೆ.
ಕೇರಳದ ಪಲಕ್ಕಾಡ್ ನಲ್ಲಿ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಆತ ಗಾಯಗೊಂಡಿದ್ದ. ಪಲಕ್ಕಾಡ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ತ್ರಿಶೂರ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.
ಈ ವೇಳೆ ಗಾಯಾಳು ಆಂಬುಲೆನ್ಸ್ ನಲ್ಲಿ ಮೂತ್ರ ಮಾಡಿದ್ದಕ್ಕೆ ರೊಚ್ಚಿಗೆದ್ದ ಚಾಲಕ ಗಾಯಾಳು ಇದ್ದ ಸ್ಟ್ರೆಚರ್ ಅನ್ನು ಜೋರಾಗಿ ಹೊರಕ್ಕೆಳೆದಿದ್ದಾನೆ. ಆ ರಭಸಕ್ಕೆ ಗಾಯಾಳು ಕೆಳಕ್ಕೆ ಬಿದ್ದಿದ್ದ.
ಆಸ್ಪತ್ರೆ ಸಿಬ್ಬಂದಿ ಅವನನ್ನು ಮೇಲಕ್ಕೆತ್ತಿ ವ್ಹೀಲ್ ಚೇರ್ ನಲ್ಲಿ ಕೂರಿಸಿ ಕರೆದೊಯ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.