
ಹಾಸನ (ಜೂ. 14): ಮಳೆ ಅವಾಂತರಕ್ಕೆ ಸುಮಾರು 40 ಸಾವಿರ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. ಆಲೂಗಡ್ಡೆ, ಹೊಗೆಸೊಪ್ಪು,ಶುಂಠಿ, ಭತ್ತ ಸೇರಿ ಹಲವು ಬೆಳೆಗಳು ಅತಿಯಾದ ಮಳೆಯಿಂದ ನಾಶವಾಗಿವೆ.
ಆಲೂರು, ಸಕಲೇಶಪುರ ಭಾಗದಲ್ಲಿ ಶುಂಠಿ, ಭತ್ತದ ಬೆಳೆ ಸಂಪೂರ್ಣ ಜಲಾವೃತಗೊಂಡಿದೆ. ಹಾಸನ ತಾಲ್ಲೂಕಿನ ವ್ಯಾಪ್ತಿಯಲ್ಲಿ ಎಂಟು ಸಾವಿರ ಹೆಕ್ಟೇರ್ ಪ್ರದೇಶದ ಆಲೂಗಡ್ಡೆ ಬೆಳೆ ನಾಶವಾಗಿದೆ. ಅರಕಲಗೂಡು, ಹೊಳೆನರಸೀಪುರ ಭಾಗದಲ್ಲಿ ಸಾವಿರಾರು ಹೆಕ್ಟೇರ್ ಪ್ರದೇಶದ ಹೊಗೆಸೊಪ್ಪು ಬೆಳೆ ನಾಶವಾಗಿದೆ.
ಮಳೆ ಅವಾಂತರ ಮಾಹಿತಿ ಪಡೆಯಲು ಬೆಳೆ ಹಾನಿ ಸಮೀಕ್ಷೆ ಹಾಗೂ ಪರಿಹಾರ ಕ್ರಮಗಳ ಬಗ್ಗೆ ಮಾಹಿತಿ ಕಲೆಹಾಕಲು ಇಂದು ಮತ್ತು ನಾಳೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.