
ಶ್ರೀನಗರ(ಅ. 11): ಪಾಂಪೋರ್'ನಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ದೀರ್ಘಕಾಲ ಮುಂದುವರಿಯುತ್ತಿರುವ ಬೆನ್ನಲ್ಲೇ ದಕ್ಷಿಣ ಕಾಶ್ಮೀರದಲ್ಲಿ ಬೇರೊಂದು ಉಗ್ರರ ತಂಡ ಅಟ್ಟಹಾಸ ಮೆರೆದಿದೆ. ಅರೆಸೇನಾ ಕಾವಲು ಪಡೆಯೊಂದರ ಮೇಲೆ ಉಗ್ರಗಾಮಿಗಳು ಗ್ರಿನೇಡ್ ದಾಳಿ ನಡೆಸಿದ ಘಟನೆ ಶೋಪಿಯನ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಈ ದಾಳಿಗೆ ಏಳು ನಾಗರಿಕರು ಮತ್ತು ಒಬ್ಬ ಸೈನಿಕ ಗಾಯಗೊಂಡಿದ್ದಾರೆ. ದಾಳಿ ಎಸಗಿದ ಉಗ್ರಗಾಮಿಗಳು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.
ಝೇಲಮ್ ನದಿಯಿಂದ ದೋಣಿ ಮೂಲಕ ಬಂದಿದ್ದರೆನ್ನಲಾದ ಉಗ್ರಗಾಮಿಗಳು ಸಿಆರ್'ಪಿಎಫ್'ನ ಕಾವಲುಪಡೆಯ ಮೇಲೆ ಗ್ರಿನೇಡ್ ದಾಳಿ ಎಸಗಿ ಕೂಡಲೇ ಕಾಲ್ಕಿತ್ತಿದ್ದಾರೆ.
ಕೆಲ ದಿನಗಳ ಹಿಂದೆ ಪಾಕಿಸ್ತಾನದ ಗಡಿಭಾಗದೊಳಗೆ ಭಾರತೀಯ ಸೇನೆ ಸರ್ಜಿಕಲ್ ಕಾರ್ಯಾಚರಣೆ ನಡೆಸಿ ಅಲ್ಲಿನ ಕೆಲ ಉಗ್ರರ ಕ್ಯಾಂಪ್'ಗಳನ್ನು ಧ್ವಂಸ ಮಾಡಿ 40ಕ್ಕೂ ಹೆಚ್ಚು ಮಂದಿಯನ್ನು ಹತ್ಯೆಗೈದಿತ್ತು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕಡೆಯಿಂದ ಭಾರತದ ಮೇಲೆ ಸೇಡಿನ ದಾಳಿಗಳು ನಡೆಯುವ ಸಾಧ್ಯತೆ ಇದೆ ಎಂದು ಭಾರತದ ಗುಪ್ತಚರ ಸಂಸ್ಥೆಗಳು ವಾರದಿಂದಲೂ ಎಚ್ಚರಿಸುತ್ತಾ ಬಂದಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.