
ನವದೆಹಲಿ (ಅ.07): ಕಾಶ್ಮೀರ ಕಣಿವೆಯಲ್ಲಿ ಗಲಭೆಯನ್ನು ಹತ್ತಿಕ್ಕಲು ಅನುಕೂಲವಾಗಲೆಂದು ನೂತನವಾಗಿ ಅಭಿವೃದ್ಧಿಪಡಿಸಲಾಗಿರುವ 21 ಸಾವಿರ ಪ್ಲಾಸ್ಟಿಕ್ ಬುಲೆಟ್’ಗಳನ್ನು ಸಿಆರ್’ಪಿಎಫ್ ಕಾಶ್ಮೀರಕ್ಕೆ ಕಳುಹಿಸಿಕೊಟ್ಟಿದೆ.
ಡಿಆರ್’ಡಿಓ ಬುಲೆಟ್’ಗಳನ್ನು ಅಭಿವೃದ್ಧಿಪಡಿಸಿದ್ದು, ಪುಣೆಯಲ್ಲಿ ತಯಾರಿಸಲಾಗಿದೆ. ಈ ಬುಲೆಟ್’ಗಳು ಕಡಿಮೆ ಮಾರಕವಾದವು. ಇದು ಪೆಲೆಟ್ ಗನ್’ಗಳ ಮೇಲಿನ ನಮ್ಮ ಅವಲಂಬನೆಯನ್ನು ಕಡಿಮೆಗೊಳಿಸುತ್ತದೆ. ಜನದಟ್ಟಣೆಯನ್ನು ನಿಯಂತ್ರಿಸಲು ಇಂತಹ ಮಾರಕೇತರ ಬುಲೆಟ್’ಗಳನ್ನು ಬಳಸಲಾಗುತ್ತದೆ. ಕಾಶ್ಮೀರ ಕಣಿವೆಯಲ್ಲಿ ಕಲ್ಲು ತೂರಾಟವನ್ನು ನಿಯಂತ್ರಿಸಲು 21 ಸಾವಿರ ಬುಲೆಟ್’ಗಳನ್ನು ನಾವು ಕಳುಹಿಸಿದ್ದೇವೆ ಎಂದು ಸಿಆರ್;ಪಿಎಫ್ ನಿರ್ದೇಶಕ ಆರ್ ಆರ್ ಭಟ್ನಾಗರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.