
ನವದೆಹಲಿ(ಫೆ.15): ಸಿಆರ್ಪಿಎಫ್ ಯೋಧರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸದಂತೆ ಸಿಆರ್ಪಿಎಫ್ ಪ್ರತಿಕ್ರಿಯೆ ನೀಡಿದ್ದು, ಗೆಳೆಯರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪಣ ತೊಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಸಿಆರ್ಪಿಎಫ್, ನಾವು ನಮ್ಮ ಗೆಳೆಯರನ್ನು ಮರೆಯವುದಿಲ್ಲ, ಪಾಪಿಗಳನ್ನು ಕ್ಷಮಿಸುವುದಿಲ್ಲ ಎಂದು ತನ್ನ ಆಕ್ರೋಶ ವ್ಯಕ್ತಪಡಿಸಿದೆ.
ಸಹೋದ್ಯೋಗಿಗಳ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪಣ ತೊಟ್ಟಿರುವ ಸಿಆರ್ಪಿಎಫ್, ಹುತಾತ್ಮ ಯೋಧರ ಕುಟುಂಬಗಳ ಜೊತೆ ನಿಲ್ಲುವುದಾಗಿಯೂ ಹೇಳಿದೆ.
ನಿನ್ನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಆತ್ಮಾಹುತಿ ದಾಳಿಕೋರನೊಬ್ಬ ಸ್ಫೋಟಕಗಳನ್ನು ಹೊತ್ತು ಸಿಆರ್ಪಿಎಫ್ ಯೋಧರು ಸಂಚರಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಸಿದ ಪರಿಣಾಮ 49 ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.