
ಬೆಂಗಳೂರು. [ಆ.26]: ಬಿಎಸ್ ವೈ ಸಂಪುಟ ಸಚಿವರಿಗೆ ಖಾತೆ ಹಂಚೆಕೆ ಬೆನ್ನಲ್ಲೇ ಅಸಮಾಧಾನ ಸ್ಫೋಟಗೊಂಡಿದೆ. ಖಾತೆ ಹಂಚಿಕೆಯಲ್ಲಿ ಅಸಮಾಧಾನ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಸಿ.ಟಿ.ರವಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಪ್ರಮುಖ ಖಾತೆ ಮೇಲೆ ಕಣ್ಣಿಟ್ಟಿದ್ದ ಸಿ.ಟಿ. ರವಿ ಅವರಿಗೆ ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡಲಾಗಿದೆ. ಇದರಿಂದ ಬೇಸರಗೊಂಡಿರುವ CT ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
17 ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಅಧಿಕೃತ ಪಟ್ಟಿ
ಪಕ್ಷ ನಿಷ್ಠೆ ಹಾಗೂ ಹಿರಿತನಕ್ಕೆ ಸೂಕ್ತ ಸ್ಥಾನ ನೀಡದ್ದಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಎಂದು ಸ್ವತಃ ಸಿ.ಟಿ.ರವಿ ಅವರು ಸುವರ್ಣನ್ಯೂಸ್ ಗೆ ಖಚಿತಪಡಿಸಿದ್ದಾರೆ. ಸಮಾಜ ಕಲ್ಯಾಣ ಖಾತೆ ನೀಡುವ ಬಗ್ಗೆ ಸಿಎಂ ಕಡೆಯಿಂದ ಮಾಹಿತಿಯಿತ್ತು. ಆದರೆ, ಪ್ರವಾಸೋದ್ಯಮ ಜತೆ ಕನ್ನಡ & ಸಂಸ್ಕೃತಿ ಇಲಾಖೆ ಖಾತೆ ನೀಡಿದ್ದಾರೆ ಎಂದು ರವಿ ಅವರು ಆಪ್ತರ ಬಳಿ ಅಸಮಾಧಾನ ತೋಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.