
ಚಿಕ್ಕಮಗಳೂರು(ಜ.12) : ಭಯೋತ್ಪಾದನೆ ರೀತಿ ಮಾತಾನಾಡುವುದೇ ಭಯೋತ್ಪಾದನೆ ಅಂದ್ರೆ ಸಿದ್ದರಾಮಯ್ಯ ಕೂಡ ಒಬ್ಬ ಭಯೋತ್ಪಾದಕರಾಗುತ್ತಾರೆ ಸಿಎಂ ಅವರ ಮಾತಿನಲ್ಲಿ ಬೆದರಿಕೆ ಇದೆ, ದಾಸ್ಯ ಇದೆ, ದುರಹಂಕಾರ ಇದೆ. ನಾವು ಯಾವತ್ತು ದುರಹಂಕಾರದ ಮಾತು ಆಗಲಿ, ಬೆದರಿಕೆ ರೀತಿ ಮಾತಾನಾಡಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಅವರ ಹೇಳಿಕೆಗೆ ಶಾಸಕ ಸಿ.ಟಿ. ತಿರುಗೇಟು ನಿಡಿದರು.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ನಾವು ಸತ್ಯದ ಪರ ಹೋರಾಟ ಮಾಡೋದನ್ನ ಭಯೋತ್ಪಾದನೆ ಅಂದ್ರೆ ಹೇಗೆ. ಸತ್ಯದ ಪರ ಹೋರಾಟ ಮಾಡೋದನ್ನು ಭಯೋತ್ಪಾದನೆ ಅಂತಾ ಕರೆಯೋದಕ್ಕೆ ಯಾವ ಶಬ್ದಕೋಶದಲ್ಲಿ ಓದಿಕೊಂಡಿದ್ದಾರೆ.. ಭಯೋತ್ಪಾದನೆ ಅನ್ನೋದಕ್ಕೆ ಶಬ್ದಕೋಶದಲ್ಲಿ ಬೇರೆ ಅರ್ಥವಿದ್ದಲ್ಲಿ ಅದನ್ನ ರಾಮಲಿಂಗರೆಡ್ಡಿ ಹಾಗೂ ಸಂಧಿ ಸಮಾಸ ಬಗ್ಗೆ ಮಾತಾಡೋ ಸಿಎಂ ಕೂಡ ಓದಿಕೊಳ್ಳಲಿ' ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ ತಾಲಿಬಾಲ್ ಹಾಗೂ ನಕ್ಸಲ್ ಜೊತೆ ನಂಟು ಇಟ್ಟುಕೊಂಡು ಮತ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಹಿಂದೂ ಯಾವತ್ತು ಉಗ್ರ ಆಗುವುದಕ್ಕೆ ಸಾಧ್ಯವಿಲ್ಲ. ಹಾಗೊಮ್ಮೆ ಹೀಗೊಮ್ಮೆ ವ್ಯಾಘ್ರವಾಗಬಹುದು ಉಗ್ರರಾಗುವುದಕ್ಕೆ ಸಾಧ್ಯವೇ ಇಲ್ಲ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.