
ಬೆಂಗಳೂರು (ಮಾ.10): ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಚಿಕಿತ್ಸೆಗಾಗಿ ವಿದೇಶಕ್ಕೆ ಹೋಗಿರುವುದರ ವಿರುದ್ಧ ಬಿಜೆಪಿ ಮುಖಂಡ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಸೋನಿಯಾ ಗಾಂಧಿ ನಿಜವಾಗಿಯೂ ಚಿಕಿತ್ಸೆಗಾಗಿ ವಿದೇಶಕ್ಕೆ ಹೋಗಿದ್ದಾರೋ ಅಥವಾ ಹಣವನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾಯಿಸಲೋ ಎಂದು ಟ್ವೀಟ್ ಮಾಡಿದ್ದಾರೆ.
ನಾಚಿಕೆಗೆಟ್ಟ ಗಾಂಧಿ ಕುಟುಂಬವು 6 ದಶಕಗಳ ಕಾಲ ಭಾರತದಲ್ಲಿ ಆಡಲಿತ ನಡೆಸಿದರೂ, ಸೋನಿಯಾ ಗಾಂಧಿಗೆ ಚಿಕಿತ್ಸೆ ನೀಡುವಂತಹ ಆಸ್ಪತ್ರೆಯನ್ನು ಕಟ್ಟಲಾಗಿಲ್ಲ ಎಂದು ಸಿ.ಟಿ.ರವಿ ಹೇಳಿದ್ದಾರೆ.
ರಾಹುಲ್ ಗಾಂಧಿ ತನ್ನ ತಾಯಿ ಸೋನಿಯಾ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಯಾಕೆ ದಾಖಲಿಸಬಾರದು? ಸಿಎಂ (ಸಿದ್ದರಾಮಯ್ಯ) ಅವರ ಚೆನ್ನಾಗಿ ಆರೈಕೆ ಮಾಡುತ್ತಾರೆ ಎಂದು ರವಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.