
ಜಿ. ಪರಮೇಶ್ವರ್ ಒಂದೋ ಗೃಹ ಸಚಿವರಾಗಿರಲಿ, ಇಲ್ಲವೇ ಕೆಪಿಸಿಸಿ ಅಧ್ಯಕ್ಷರಾಗಿರಲಿ. ಎರಡೂ ಹುದ್ದೆ ಅವರಿಂದ ನಿಭಾಯಿಸಲು ಆಗುತ್ತಿಲ್ಲ ಅಂತ ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಟಿ ನಡೆಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ದಿನೇದಿನೇ ಹದಗೆಡುತ್ತಿದೆ. ಪರಮೇಶ್ವರ್ ಗೃಹಸಚಿವರೂ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರಿವುದರಿಂದ ಅವರಿಂದ ಎರಡೂ ಹುದ್ದೆ ನಿಭಾಯಿಸಲಾಗುತ್ತಿಲ್ಲ. ಇದರ ನೇರ ಪರಿಣಾಮ ರಾಜ್ಯದ ಕಾನೂನು ಸುವ್ಯವಸ್ಥೆ ಮೇಲಾಗ್ತಿದೆ ಅಂತ ಸಿಟಿ ರವಿ ವಿಶ್ಲೇಷಿಸಿದರು. ಸೋಮವಾರದಿಂದ ಆರಂಭವಾಗಲಿರುವ ಅಧಿವೇಶನದ ವೇಳೆ ರಾಜ್ಯದ ಕಾನೂನು ಸುವ್ಯವಸ್ಥೆ ವಿಚಾರ ಹದಗೆಟ್ಟಿರುವ ವಿಚಾರ ಪ್ರಸ್ತಾಪಿಸುವುದಾಗಿ ತಿಳಿಸಿದ ಅವರು, ಪರಮೇಶ್ವರ್ ಯಾವುದಾದರೂ ಒಂದು ಹುದ್ದೆಯಲ್ಲಿ ಮುಂದುವರಿಯಲಿ ಅಂತ ಒತ್ತಾಯಿಸುವುದಾಗಿ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.