ಎಚ್ಚರಿಕೆ ಸಂದೇಶ ರವಾನಿಸಿದ ಶಾಸಕ ಸಿಟಿ ರವಿ

Published : Jun 27, 2019, 07:55 AM IST
ಎಚ್ಚರಿಕೆ ಸಂದೇಶ ರವಾನಿಸಿದ ಶಾಸಕ ಸಿಟಿ ರವಿ

ಸಾರಾಂಶ

ಶಾಸಕ ಸಿಟಿ ರವಿ ಎಚ್ಚರಿಕೆ ಸಂದೇಶ ಒಂದನ್ನು ರವಾನಿಸಿದ್ದಾರೆ. ತಮಗೆ ನಿವೇಶನ ಮಂಜೂರು ಮಾಡದಿದ್ದಲ್ಲಿ ಧರಣಿ ಕೂರುವುದಾಗಿ ಹೇಳಿದ್ದಾರೆ.

ಬೆಂಗಳೂರು [ಜೂ.27] :  ಮುಖ್ಯಮಂತ್ರಿಗಳ ವಿವೇಚನಾ ಕೋಟಾದ ಅಡಿಯಲ್ಲಿ ತಮಗೆ ಮಂಜೂರಾಗಿದ್ದ ನಿವೇಶನಕ್ಕೆ ಬದಲಿ ನಿವೇಶನ ಇಲ್ಲವೇ ಹಿಂದೆ ಮಂಜೂರಾಗಿದ್ದ ನಿವೇಶನವನ್ನೇ ಒಂದು ವಾರದೊಳಗೆ ನೀಡದಿದ್ದರೆ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಎದುರು ಧರಣಿ ಮಾಡುವುದಾಗಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಎಚ್ಚರಿಸಿದ್ದಾರೆ.

ಬುಧವಾರ ವಿಧಾನಸೌಧದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, 2006ರಲ್ಲಿ ಬಿಡಿಎ ನಿವೇಶನ ಮಂಜೂರಾಗಿತ್ತು. ಆಗ ಪ್ರದೇಶ ಅಷ್ಟೊಂದು ಅಭಿವೃದ್ಧಿಯಾಗಿರಲಿಲ್ಲ, ಹಾಗಾಗಿ ಬದಲಿ ನಿವೇಶನ ನೀಡುವಂತೆ ಬಿಡಿಎಗೆ ಮನವಿ ಮಾಡಿದ್ದೆ, ಆದರೆ ಈವರೆಗೆ ಬದಲಿ ನಿವೇಶನ ನೀಡಿಲ್ಲ. ಈ ಮಧ್ಯ ಶಕುಂತಲಾ ಎಂಬುವವರಿಗೆ ಬಿಡಿಎ ಈ ನಿವೇಶನವನ್ನು ಮಂಜೂರು ಮಾಡಿದೆ. ಈಕೆ ಖರೀದಿಸಿದ 45 ದಿನಗಳಲ್ಲಿ ಆ ನಿವೇಶನವನ್ನು ಬೇರೆಯವರಿಗೆ ಮಾರಾಟ ಮಾಡಿದ್ದಾರೆ. ಹೊಸದಾಗಿ ನಿವೇಶನ ಖರೀದಿಸಿದ ವ್ಯಕ್ತಿ ಅಲ್ಲಿ ಕೊಳವೆಬಾವಿ ಕೊರೆಸುತ್ತಿರುವ ವಿಷಯವನ್ನು ಪಕ್ಕದ ನಿವೇಶನದ ಮಾಲೀಕರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬುಧವಾರ ನಾನೇ ಖುದ್ದಾಗಿ ಬಿಡಿಎಗೆ ತೆರಳಿ ಕಡತ ತರಿಸಿದಾಗ ವಿಷಯ ಗೊತ್ತಾಗಿದೆ. ಅಧಿಕಾರಿಗಳಿಗೆ ನಿಮ್ಮ ಅಕ್ರಮ ಬಯಲಿಗೆ ಎಳೆಯಲು ನಾನೇ ಖುದ್ದು ಬರುತ್ತೇನೆ ಎಂಬ ಎಚ್ಚರಿಕೆ ನೀಡಿದ್ದೇನೆ ಎಂದರು.

ಬಿಡಿಎ ಪೊಗದಸ್ತಾದ ಹುಲ್ಲುಗಾವಲು

ಬಿಡಿಎ ಸಂಸ್ಥೆಯಲ್ಲಿ ಕೆಲಸ ಮಾಡುವ ನಾಲ್ಕನೆ ದರ್ಜೆ ನೌಕರನಿಂದ ಹಿಡಿದು, ಅಧಿಕಾರಿ ವರ್ಗದವರನ್ನು ನೋಡಿದರೆ ಬಿಡಿಎ ಯಾಕೆ ನಷ್ಟದಲ್ಲಿದೆ ಎಂಬುದು ಗೊತ್ತಾಗುತ್ತದೆ. ಸಾಮಾನ್ಯ ಜನರಿಗೆ 20-30 ವರ್ಷದಿಂದ ಅರ್ಜಿ ಹಾಕಿದರೂ ನಿವೇಶನ ಸಿಗುವುದಿಲ್ಲ. ನನ್ನಂತವರಿಗೆ ಈ ರೀತಿ ಆದರೆ ಸಾಮಾನ್ಯ ಜನರ ಗತಿ ಏನು, ಸದಾ ನಷ್ಟದಲ್ಲಿರುವ ಆದರೆ ಇಲ್ಲಿಗೆ ಬರಲು ಪೈಪೋಟಿ ಇರುವ ಜಾಗವೆಂದರೆ ಬಿಡಿಎ ಮಾತ್ರ. ದಂಧೆ ಮಾಡಲು ಪೊಗದಸ್ತವಾದ ಹುಲ್ಲುಗಾವಲಾಗಿದೆ ಎಂದು ವ್ಯಂಗ್ಯವಾಡಿದರು.

ಬಿಡಿಎ ಮುಚ್ಚಲು ಏನೇನು ಬೇಕೋ ಅದನ್ನೆಲ್ಲವನ್ನು ಮಾಡುತ್ತಿದ್ದಾರೆ. ಈ ಸಂಸ್ಥೆಯನ್ನು ಸರಿ ದಾರಿಗೆ ತರುವ ಯೋಚನೆ ಮಾಡುವ ಅಧಿಕಾರಿ ಬಿಡಿಎಗೆ ಬೇಕಾಗಿದೆ ಎಂದು ರವಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bhabana Menon: 'ಮಲಯಾಳಂ ಚಿತ್ರರಂಗದ ಹೆಮ್ಮೆ' ಎಂದ ಸಚಿವರು; ನಟಿ ಭಾವನಾಗೆ ಪ್ರಶಂಸೆ ಸುರಿಮಳೆ!'
ಆದಾಯ ಕಡಿಮೆ ಆಗಿದ್ದೋ, ಖರ್ಚು ಜಾಸ್ತಿಯಾಗಿದ್ದೋ! ಯೋಚಿಸಬೇಕಾದ ಕೆಲವು ಆರ್ಥಿಕ ಸಂಗತಿಗಳು