
ನಾಶಿಕ್, ಮಹಾರಾಷ್ಟ್ರ(ಅ. 15): ತ್ರ್ಯಂಬಕೇಶ್ವರ್ ಮತ್ತು ಇಗಾತಪುರಿ ತಾಲೂಕಿನ ಏಳು ಗ್ರಾಮಗಳಲ್ಲಿ ಕರ್ಫ್ಯೂ ಹೇರಿಕೆ ಶನಿವಾರವೂ ಮುಂದುವರಿದಿದೆ. ಅಪ್ರಾಪ್ತೆಯ ಮೇಲೆ ಅತ್ಯಾಚಾರ ಯತ್ನ ನಡೆದ ಘಟನೆ ಸಂಬಂಧ ಈ ಎರಡು ತಾಲೂಕುಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಗಲಭೆಯೇ ನಡೆದ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ಅನೇಕ ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಕಳೆದೆರಡು ದಿನಗಳಿಂದ ಯಾವುದೇ ಗಲಭೆಗಳು ನಡೆದಿಲ್ಲವಾದರೂ 7 ಗ್ರಾಮಗಳಲ್ಲಿ ನಿಷೇಧಾಜ್ಞೆ ಮುಂದುವರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಜೊತೆಗೆ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಇನ್ನೊಂದು ದಿನದಮಟ್ಟಿಗೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
ತ್ರೆಂಬಕೇಶ್ವರ್ ಸಮೀಪದ ತಾಲೇಗಾಂವ್ ಗ್ರಾಮದಲ್ಲಿ 5 ವರ್ಷದ ಹುಡುಗಿ ಮೇಲೆ 16 ವರ್ಷದ ಬಾಲಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದ. ಇದು ಅಕ್ಕಪಕ್ಕ ಊರಿನಲ್ಲಿ ಪ್ರಕ್ಷುಬ್ಬ ವಾತಾವರಣಕ್ಕೆ ಎಡೆ ಮಾಡಿಕೊಟ್ಟಿತು. ನಾಸಿಕ್'ವರೆಗೂ ಅನೇಕ ಗ್ರಾಮಗಳಲ್ಲಿ ಗಲಭೆಗಳಾಗಿ ಸೂಕ್ಷ್ಮ ವಾತಾವರಣ ನಿರ್ಮಾಣವಾಗಿತ್ತು. ಗಲಭೆ ಸಂಬಂಧ ಈವರೆಗೆ 117 ಮಂದಿಯನ್ನು ಬಂಧಿಸಲಾಗಿದೆ.
ಪಿಟಿಐ ವರದಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.