
ದೆಹಲಿ (ನ.07): ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಗಾಂಧಿ ಅನಾರೋಗ್ಯ ಕಾರಣದಿಂದ ಅವರ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಧ್ಯಕ್ಷತೆಯನ್ನು ಮೊದಲ ಬಾರಿಗೆ ರಾಹುಲ್ ಗಾಂಧಿ ವಹಿಸಿದ್ದರು.
ರಾಹುಲ್ ಗಾಂಧಿ ಪಕ್ಷದ ನೇತೃತ್ವ ವಹಿಸಿಕೊಳ್ಳುತ್ತಾರಾ ಎನ್ನುವ ಅನುಮಾನದ ನಡುವೆಯೇ ಪಕ್ಷದ ಕಾರ್ಯಕರ್ತರೆಲ್ಲ ಇವತ್ತು ಒಂದೆಡೆ ಸೇರಿ ಸಭೆ ನಡೆಸಿದರು. ಪಕ್ಷದ ನೇತೃತ್ವ ವಹಿಸುಕೊಳ್ಳುವಂತೆ ಕಾರ್ಯಕರ್ತರು ಒತ್ತಾಯಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಪಕ್ಷದ ಹಿರಿಯ ಮುಖಂಡ ಎ.ಕೆ ಆ್ಯಂಟನಿ, ಪಕ್ಷದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲು ಸರಿಯಾದ ಸಮಯ ಎಂದು ಅಭಿಪ್ರಾಯಪಟ್ಟರು. ಇದಕ್ಕೆ ಪಕ್ಷದ ಉಳಿದ ಸದಸ್ಯರು ಸಮ್ಮತಿ ಸೂಚಿಸಿದರು.
ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ಮೋದಿ ಸರ್ಕಾರದ ವೈಫಲ್ಯಗಳ ಬಗ್ಗೆ ಟೀಕಿಸುತ್ತಾ ಈ ಬಾರಿಯ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.