ಕಮ್ಯೂನಿಸ್ಟರು ಅಧಿಕಾರಕ್ಕೆ ಬಂದಾಗೆಲ್ಲಾ ಕೇರಳದಲ್ಲಿ ಹಿಂಸಾಚಾರ: ಅಮಿತ್ ಶಾ ಆರೋಪ

Published : Oct 03, 2017, 03:24 PM ISTUpdated : Apr 11, 2018, 01:01 PM IST
ಕಮ್ಯೂನಿಸ್ಟರು ಅಧಿಕಾರಕ್ಕೆ ಬಂದಾಗೆಲ್ಲಾ ಕೇರಳದಲ್ಲಿ ಹಿಂಸಾಚಾರ: ಅಮಿತ್ ಶಾ ಆರೋಪ

ಸಾರಾಂಶ

"ಎಡರಂಗ ಅಧಿಕಾರಕ್ಕೆ ಬಂದಾಗೆಲ್ಲಾ ಕೇರಳದಲ್ಲಿ ಹಿಂಸಾಚಾರಗಳು ಆರಂಭವಾಗುತ್ತವೆ. ಆ ರಾಜ್ಯದಲ್ಲಿ 120ಕ್ಕೂ ಹೆಚ್ಚು ಬಿಜೆಪಿ ಮತ್ತು ಆರೆಸ್ಸೆಸ್ ಕಾರ್ಯಕರ್ತರ ಹತ್ಯೆಯಾಗಿದೆ. ಮುಖ್ಯಮಂತ್ರಿ ಪಿನಾರಯಿ ವಿಜಯನ್ ಅವರ ಕ್ಷೇತ್ರವೊಂದರಲ್ಲೇ 80ಕ್ಕೂ ಹೆಚ್ಚು ಕೊಲೆಯಾಗಿದೆ. ಇದಕ್ಕೆ ಸಿಎಂ ಉತ್ತರ ನೀಡಬೇಕಿದೆ," ಎಂದು ಅಮಿತ್ ಶಾ ಆಗ್ರಹಿಸಿದ್ದಾರೆ.

ಕಣ್ಣೂರು(ಅ. 03): ದೇಶದಲ್ಲಿ ಎಡರಂಗ ಆಡಳಿತದ ರಾಜ್ಯಗಳಲ್ಲಿ ರಾಜಕೀಯ ಹತ್ಯೆಗಳು ಸಾಮಾನ್ಯವಾಗಿರುತ್ತವೆ. ಎಡಪಕ್ಷ ಸರಕಾರ ಅಸ್ತಿತ್ವದಲ್ಲಿರುವ ಕೇರಳ ಮತ್ತು ತ್ರಿಪುರಾಗಳಲ್ಲಿ ನಡೆಯುತ್ತಿರುವ ಸರಣಿ ಹಿಂಸಾಚಾರಗಳು ಇದಕ್ಕೆ ಸಾಕ್ಷಿ ಎಂದು ಅಮಿತ್ ಶಾ ಹೇಳಿದ್ದಾರೆ.

"ಎಡರಂಗ ಅಧಿಕಾರಕ್ಕೆ ಬಂದಾಗೆಲ್ಲಾ ಕೇರಳದಲ್ಲಿ ಹಿಂಸಾಚಾರಗಳು ಆರಂಭವಾಗುತ್ತವೆ. ಆ ರಾಜ್ಯದಲ್ಲಿ 120ಕ್ಕೂ ಹೆಚ್ಚು ಬಿಜೆಪಿ ಮತ್ತು ಆರೆಸ್ಸೆಸ್ ಕಾರ್ಯಕರ್ತರ ಹತ್ಯೆಯಾಗಿದೆ. ಮುಖ್ಯಮಂತ್ರಿ ಪಿನಾರಯಿ ವಿಜಯನ್ ಅವರ ಕ್ಷೇತ್ರವೊಂದರಲ್ಲೇ 80ಕ್ಕೂ ಹೆಚ್ಚು ಕೊಲೆಯಾಗಿದೆ. ಇದಕ್ಕೆ ಸಿಎಂ ಉತ್ತರ ನೀಡಬೇಕಿದೆ," ಎಂದು ಅಮಿತ್ ಶಾ ಆಗ್ರಹಿಸಿದ್ದಾರೆ.

ಕೇರಳದಲ್ಲಿ ರಾಜಕೀಯ ಹತ್ಯೆಗಳಾಗುತ್ತಿದ್ದರೂ ಮಾನವ ಹಕ್ಕು ಸಂಘಟನೆಗಳು ಯಾಕೆ ತುಟಿ ಪಿಟಕ್ ಎನ್ನುತ್ತಿಲ್ಲ ಎಂದೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಪ್ರಶ್ನಿಸಿದ್ದಾರೆ.

ಇಲ್ಲಿಗೆ ಸಮೀಪದ ತಳಿಪರಂಬದಲ್ಲಿನ ರಾಜರಾಜೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ, ಬಳಿಕ ಪಯ್ಯನ್ನೂರ್'ನಲ್ಲಿ ಬಿಜೆಪಿಯ ಜನರಕ್ಷಾ ಯಾತ್ರೆಯ ಉದ್ಘಾಟನೆ ಮಾಡಿದ್ದಾರೆ. ಈ ಯಾತ್ರೆಯು ಕೇರಳಾದ್ಯಂತ ಸಾಗಿ ಅ.17ರಂದು ರಾಜಧಾನಿ ತಿರುವನಂತಪುರಂನಲ್ಲಿ ಮುಕ್ತಾಯವಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ: ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ಜವರಾಯನಂತೆ ಬಂತು ಜಲ್ಲಿಕಲ್ಲು ತುಂಬಿದ್ದ ಲಾರಿ: ಮನೆ ಮುಂದೆ ಚಳಿ ಕಾಯಿಸುತ್ತಿದ್ದ 90 ವರ್ಷದ ವೃದ್ಧ ಬಲಿ