
ಚೆನ್ನೈ(ನ.30): ಬಂಗಾಳ ಕೊಲ್ಲಿಯಲ್ಲಿ ಪ್ರಬಲ ಚಂಡ ಮಾರುತವೊಂದು ಸಕ್ರಿಯವಾಗಿದ್ದು, ಅದು ಡಿ.2ರಂದು ತಮಿಳುನಾಡು ಕರಾವಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ, ಗುರುವಾರದಿಂದ ತಮಿಳುನಾಡಿನ ಉತ್ತರ ಕರಾವಳಿ ಹಾಗೂ ಪುದುಚೇರಿಗಳಲ್ಲಿ ಭಾರಿ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನೂ ಇಲಾಖೆ ನೀಡಿದೆ.
‘ನಾಡಾ’ ಚಂಡಮಾರುತದ ಪ್ರಭಾವವು ಬೆಂಗಳೂರಿನ ಮೇಲೂ ಬೀರಲಿದ್ದು, ಇಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೇರಳ ಭಾಗದಲ್ಲೂ ಮಳೆಯಾಗುವ ನಿರೀಕ್ಷೆಯಿದೆ. ಸದ್ಯಕ್ಕೆ ಚಂಡಮಾರುತವು ತಮಿಳುನಾಡು ರಾಜಧಾನಿ ಆಗ್ನೇಯ ಚೆನ್ನೈನಿಂದ 770 ಕಿ.ಮೀ. ದೂರದಲ್ಲಿದ್ದು ಪಶ್ಚಿಮದ ಕಡೆ ಬರುತ್ತಿದೆ ಎಂದು ಅಂದಾಜಿಸಲಾಗಿದೆ.
ಬುಧವಾರ ಸಂಜೆಯಿಂದಲೇ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ ಹಾಗೂ ಈಗಾಗಲೇ ತೆರಳಿದವರನ್ನು ವಾಪಸ್ ಬರುವಂತೆ ತಿಳಿಸಲಾಗಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಎಲ್ಲ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ತಮಿಳುನಾಡಿನಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತೀರಪ್ರದೇಶದಲ್ಲಿರುವ ನಾಗರಿಕರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಕಾರ್ಯವನ್ನೂ ಆರಂಭಿಸಲಾಗಿದೆ ಎಂದು ತಮಿಳುನಾಡು ಮತ್ತು ಪುದುಚೇರಿ ಸರ್ಕಾರಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.