ಇಂದು ಅಪ್ಪಳಿಸಲಿದೆ ತಿತಿಲಿ ಚಂಡಮಾರುತ

By Web DeskFirst Published Oct 11, 2018, 8:18 AM IST
Highlights

ಒಡಿಶಾಗೆ ಇಂದು ‘ತಿತಿಲಿ’ ದಾಳಿ | ಬೆಳಗ್ಗೆ 5.30ಕ್ಕೆ ಅಪ್ಪಳಿಸಲಿದೆ ಭಾರಿ ತೀವ್ರತೆಯ ಚಂಡಮಾರುತ | ನಿನ್ನೆಯಿಂದಲೇ ಒಡಿಶಾ ಕರಾವಳಿಯಲ್ಲಿ ಭಾರಿ ಮಳೆ

ಭುವನೇಶ್ವರ (ಅ. 11): ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ತಿತಿಲಿ’ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಗುರುವಾರ ಮುಂಜಾನೆ 5.30ರ ವೇಳೆಗೆ ಒಡಿಶಾ ಕರಾವಳಿಗೆ ಅಪ್ಪಳಿಸಿದೆ. 

ಗಂಟೆಗೆ 140ರಿಂದ 150 ಕಿ.ಮೀ. ವೇಗದ ಗಾಳಿ ಹಾಗೂ ಧಾರಾಕಾರ ಮಳೆಯೊಂದಿಗೆ ಈ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಸಮುದ್ರದ ಅಲೆಗಳ ಎತ್ತರ ಒಂದು ಮೀಟರ್‌ಗಿಂತ ಹೆಚ್ಚಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಒಡಿಶಾ ಕರಾವಳಿಯ ಐದು ಜಿಲ್ಲೆಗಳಲ್ಲಿ ತಗ್ಗುಪ್ರದೇಶಗಳ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ಗಂಜಾಂ ಜಿಲ್ಲೆಯ ಗೋಪಾಲಪುರ ಪ್ರದೇಶಕ್ಕೆ ಗುರುವಾರ ಮುಂಜಾನೆ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅಧಿಕಾರಿಗಳ ಸಭೆ ನಡೆಸಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದಾರೆ. ಗುರುವಾರ ಹಾಗೂ ಶುಕ್ರವಾರ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ವಿದ್ಯಾರ್ಥಿ ಸಂಘದ ಚುನಾವಣೆಯನ್ನು ರದ್ದುಪಡಿಸಲಾಗಿದೆ.

ಚಂಡಮಾರುತದ ಪ್ರಭಾವದ ಹಿನ್ನೆಲೆಯಲ್ಲಿ ಬುಧವಾರವೇ ಒಡಿಶಾ ಕರಾವಳಿಯ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಗುರುವಾರದವರೆಗೆ ಭಾರಿಯಿಂದ ಭಾರಿ ಪ್ರಮಾಣದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

 

click me!