
ಒಡಿಶಾ : ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮವಾಗಿ ಆಂಧ್ರ ಪ್ರದೇಶ ಹಾಗೂ ಒಡಿಶಾ ಕರಾವಳಿ ತೀರಕ್ಕೆ ತಿತಲಿ ಚಂಡಮಾರುತ ಅಪ್ಪಳಿಸಿದೆ. ಇದರಿಂದ ಒಡಿಶಾ ಹಾಗೂ ಆಂಧ್ರ ಪ್ರದೇಶದಲ್ಲಿ ಭಾರೀ ಮಳೆ ಸುರಿಯುವ ಎಚ್ಚರಿಕೆ ನಿಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದ್ದು ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಒಡಿಶಾದಲ್ಲಿ ಜನರನ್ನು ಸ್ಥಳಾಂತರ ಮಾಡಲಾಗುತ್ತಿದೆ.
ಒಡಿಶಾದ ಗಂಜಾಮ್, ಪುರಿ, ಖುರ್ದಾ, ಕೇಂದ್ರ ಪರಾ, ಜಗತ್ ಸಿಂಗ್ ಪುರ ಜಿಲ್ಲೆಯಲ್ಲಿ ಜನರನ್ನು ಶೀಘ್ರವಾಗಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡುವಂತೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸೂಚಿಸಿದ್ದಾರೆ.
ಈಗಾಗಲೇ ಸುರಕ್ಷಿತ ಪ್ರದೇಶಗಳಿಗೆ ಜನರನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ತಿತಲಿ ಚಂಡಮಾರುತ ಅಪ್ಪಳಿಸಿದ ಪರಿಣಾಮ ಭಾರಿ ಪ್ರಮಾಣದಲ್ಲಿ ಭೂ ಕುಸಿತದಂತಹ ಅಪಾಯಕಾರಿ ವಿದ್ಯಮಾನಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಹವಾಮಾನ ಎಚ್ಚರಿಕೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.