
ಭುವನೇಶ್ವರ/ ನವದೆಹಲಿ: ಕರ್ನಾಟಕದ ಕೊಡಗು ಸೇರಿದಂತೆ ಇತರ ಭಾಗಗಳು ಮತ್ತು ಕೇರಳ ಭಾರೀ ನೆರೆಯಿಂದ ಸುಧಾರಿಸಿಕೊಳ್ಳುತ್ತಿರುವ ಬೆನ್ನಲ್ಲೇ, ಗುರುವಾರ ರಾತ್ರಿ ಆಂಧ್ರಪ್ರದೇಶ ಹಾಗೂ ಒಡಿಶಾದ ಕರಾವಳಿಗೆ ಚಂಡ ಮಾರುತ ಅಪ್ಪಳಿಸಿದೆ. ಇದರಿಂದ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಸಿದೆ.
ಪ್ರತೀ ಗಂಟೆಗೆ ಕೇವಲ 12 ಕಿ.ಮೀ ವೇಗವಾಗಿ ಚಲಿಸುತ್ತಿರುವ ಚಂಡಮಾರುತವು ಮುಂದಿನ 12 ಗಂಟೆಯೊಳಗೆ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಗುರುವಾರ ಸಂಜೆ ಐಎಂಡಿ ಹೇಳಿದೆ.
ಈಗಾಗಲೇ ಭಾರೀ ಮಳೆಯಿಂದ ತತ್ತರಿಸಿರುವ ಒಡಿಶಾದ ಹಲವು ಭಾಗಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುಂದುವರಿಯಲಿದೆ ಎಂದಿದೆ ಐಎಂಡಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.