ಸಿಲಿಂಡರ್ ಸ್ಫೋಟ; ಕಟ್ಟಡ ಕುಸಿತ

First Published May 6, 2018, 11:46 AM IST
Highlights

ಕಾಡುಗೋಡಿ ಬಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿದಿದೆ.  ಬಿಲ್ಡಿಂಗ್ ಒಳಗೆ ಮೂರರಿಂದ ಐದು ಮಂದಿ ಸಿಲುಕಿರುವ ಶಂಕೆಯಿದೆ. 

ಬೆಂಗಳೂರು (ಮೇ.06): ಕಾಡುಗೋಡಿ ಬಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿದಿದೆ.  ಬಿಲ್ಡಿಂಗ್ ಒಳಗೆ ಮೂರರಿಂದ ಐದು ಮಂದಿ ಸಿಲುಕಿರುವ ಶಂಕೆಯಿದೆ. 

ಬೆಳಗ್ಗೆ 10:25 ರ ವೇಳೆಗೆ ಈ ಘಟನೆ ನಡೆದಿದೆ. ಬಿಲ್ಡಿಂಗ್ ಒಳಗೆ ಸುಮಾರು ಏಳೆಂಟು ಮಂದಿ ಇದ್ರು. ಈಗಾಗಲೇ ಇಬ್ಬರನ್ನು ರಕ್ಷಿಸಲಾಗಿದೆ.  ಕಟ್ಟಡದ ಅವಶೇಷಗಳ ಅಡಿ ಮೂವರಿಂದ ನಾಲ್ಕು ಮಂದಿ ಸಿಲುಕಿರುವ ಶಂಕೆಯಿದೆ.  ಬಿಲ್ಡಿಂಗ್’ನಲ್ಲಿ ಅಕ್ರಮವಾಗಿ ಗ್ಯಾಸ್ ತುಂಬಿಸಲಾಗುತ್ತಿತ್ತು ಎಂದು ಶಂಕಿಸಲಾಗಿದೆ. 

click me!