ಸಂಸದ ಮುನಿಯಪ್ಪ ಸಂಬಂಧಿಗೆ ಸೇರಿದ ಗೋದಾಮಿ'ನಲ್ಲಿ ಸ್ಫೋಟ: ಭಸ್ಮವಾದ 2 ಸಾವಿರ ಸಿಲಿಂಡರ್'ಗಳು

Published : Dec 25, 2016, 03:08 PM ISTUpdated : Apr 11, 2018, 12:46 PM IST
ಸಂಸದ ಮುನಿಯಪ್ಪ ಸಂಬಂಧಿಗೆ ಸೇರಿದ ಗೋದಾಮಿ'ನಲ್ಲಿ ಸ್ಫೋಟ: ಭಸ್ಮವಾದ 2 ಸಾವಿರ ಸಿಲಿಂಡರ್'ಗಳು

ಸಾರಾಂಶ

ಸ್ಫೋಟದ ರಭಸಕ್ಕೆ 3 ಲಾರಿಗಳು ಧಗಧಗನೆ ಹೊತ್ತಿ ಉರಿದಿವೆ. ಪಟಾಕಿಗಳಂತೆ ಸುಮಾರು 2 ಗಂಟೆಗಳ ಕಾಲ ಸಿಲಿಂಡರ್‌ಗಳು ಸ್ಫೋಟಗೊಂಡಿವೆ. 

ಚಿಂತಾಮಣಿ(ಡಿ.26):  ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಾಯನಹಳ್ಳಿ ಬಳಿ ಅಗ್ನಿ ದುರಂತ ಸಂಭವಿಸಿದೆ.  ಗೋದಾಮಿ'ನಲ್ಲಿ   ಗ್ಯಾಸ್ ಸಿಲಿಂಡರ್ ಗಳು ತುಂಬಿದ ಲಾರಿಗಳಿಗೆ ಬೆಂಕಿ ತಗುಲಿದೆ. ಪರಿಣಾಮ ಲಾರಿಯಲ್ಲಿದ್ದ  2 ಸಾವಿರಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಸ್ಫೋಟದ ರಭಸಕ್ಕೆ 3 ಲಾರಿಗಳು ಧಗಧಗನೆ ಹೊತ್ತಿ ಉರಿದಿವೆ. ಪಟಾಕಿಗಳಂತೆ ಸುಮಾರು 2 ಗಂಟೆಗಳ ಕಾಲ ಸಿಲಿಂಡರ್‌ಗಳು ಸ್ಫೋಟಗೊಂಡಿವೆ.  ಸಿಲಿಂಡರ್ ಸ್ಫೋಟದ ಶಬ್ದ ಕೇಳಿ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.  ಸಂಸದ ಕೆ.ಎಚ್ ಮುನಿಯಪ್ಪ ಸಂಬಂಧಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಹೆಚ್'ಪಿ ಗೋಡಾನ್ ಇದಾಗಿದೆ.  ಇನ್ನೂ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

KSRTC ಬಸ್ ಡ್ರೈವರ್ ಹಾರ್ನ್ ಮಾಡಿದ್ದೇ ತಪ್ಪಾಯ್ತಂತೆ; ಊರಿನ ಜನರೆಲ್ಲಾ ಸೇರಿಕೊಂಡು ಧರ್ಮದೇಟು ಕೊಟ್ಟರು!
ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು ಮಂಜೂರು!