ಡಿಕೆಶಿಗೆ ಧಾರವಾಡ ಜಿಲ್ಲೆ ಉಸ್ತುವಾರಿ?

Published : May 14, 2019, 09:42 AM IST
ಡಿಕೆಶಿಗೆ ಧಾರವಾಡ ಜಿಲ್ಲೆ ಉಸ್ತುವಾರಿ?

ಸಾರಾಂಶ

ಡಿಕೆಶಿಗೆ ಧಾರವಾಡ ಜಿಲ್ಲೆ ಉಸ್ತುವಾರಿ?  ಉಪ ಚುನಾವಣೆ ನಂತರ ಬಳ್ಳಾರಿ ಹಿಂಪಡೆದು ಧಾರವಾಡ ನೀಡುವ ಸಾಧ್ಯತೆ | ಬಳ್ಳಾರಿ ಉಸ್ತುವಾರಿ ತುಕಾರಾಂಗೆ?

ಬೆಂಗಳೂರು (ಮೇ. 14):  ಉಪ ಚುನಾವಣೆ ನಂತರ ಜಿಲ್ಲಾ ಉಸ್ತುವಾರಿ ಸಚಿವರಲ್ಲೂ ಬದಲಾವಣೆಯಾಗುವ ಸಾಧ್ಯತೆಯಿದ್ದು, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಿ.ಕೆ. ಶಿವಕುಮಾರ್‌ ಅವರಿಗೆ ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಉಸ್ತುವಾರಿ ದೊರೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ಬಗ್ಗೆ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಹಾಗೂ ಶಿವಕುಮಾರ್‌ ಅವರ ನಡುವೆ ಒಂದು ಸುತ್ತಿನ ಮಾತುಕತೆ ನಡೆದಿದ್ದು, ಚುನಾವಣೆ ಮುಗಿಯುತ್ತಿದ್ದಂತೆಯೇ ಈ ಬಗ್ಗೆ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

ಕುಂದಗೋಳ ವಿಧಾನಸಭಾ ಕ್ಷೇತ್ರದ ಚುನಾವಣೆಯ ಹೊಣೆಗಾರಿಕೆ ಹೊತ್ತಿರುವ ಶಿವಕುಮಾರ್‌ ಅವರಿಗೆ ಬಳ್ಳಾರಿ ಜಿಲ್ಲೆಯ ಬದಲಿಗೆ ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಉಸ್ತುವಾರಿ ನೀಡುವುದು ಉತ್ತಮ ಎಂಬ ಚಿಂತನೆಯಿದ್ದು, ಶಿವಕುಮಾರ್‌ ಅವರಿಗೂ ಈ ಬಗ್ಗೆ ಆಸಕ್ತಿಯಿದೆ.

ಹೀಗಾಗಿ ವೇಣುಗೋಪಾಲ್‌ ಅವರೊಂದಿಗೆ ಚರ್ಚೆಯೂ ನಡೆದಿದೆ. ಈ ಚರ್ಚೆ ವೇಳೆ ಬಳ್ಳಾರಿ ಜಿಲ್ಲೆಗೆ ಸ್ಥಳೀಯರಿಗೆ ಉಸ್ತುವಾರಿ ನೀಡಬೇಕು ಎಂಬ ಒತ್ತಡವಿದೆ. ಹೀಗಾಗಿ ಸಚಿವ ತುಕಾರಾಂ ಅವರಿಗೆ ಬಳ್ಳಾರಿ ಉಸ್ತುವಾರಿಯನ್ನು ವಹಿಸುವ ಚಿಂತನೆಯಿದೆ ಎನ್ನಲಾಗಿದೆ.

ತುಕಾರಾಂ ಅವರಿಗೆ ಬಳ್ಳಾರಿ ಜಿಲ್ಲೆ ಉಸ್ತುವಾರಿ ನೀಡಿದರೆ ಆಗ ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಉಸ್ತುವಾರಿಯನ್ನು ಹೆಚ್ಚುವರಿಯಾಗಿ ಹೊಂದಿರುವ ಆರ್‌.ವಿ. ದೇಶಪಾಂಡೆ ಅವರಿಂದ ಹಿಂಪಡೆದು ಡಿ.ಕೆ. ಶಿವಕುಮಾರ್‌ ಅವರಿಗೆ ನೀಡುವ ಚಿಂತನೆ ನಡೆದಿದೆ ಎನ್ನಲಾಗುತ್ತಿದೆ.

ಲಿಂಗಾಯತ-ವೀರಶೈವ ಧರ್ಮ ವಿಚಾರದಲ್ಲಿ ಡಿ.ಕೆ.ಶಿವಕುಮಾರ್‌ ಅವರು ವಿಭಜನೆ ಬೇಡ ಎಂಬ ನಿಲುವು ಪ್ರಕಟಿಸಿರುವುದರಿಂದ ಈ ಭಾಗದಲ್ಲಿ ಕಾಂಗ್ರೆಸ್‌ಗೆ ಅನುಕೂಲವಾಗಲಿದೆ. ಹೀಗಾಗಿ, ತಮಗೆ ಉಸ್ತುವಾರಿ ನೀಡಿದರೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸಬಲವಾಗಿ ಕಟ್ಟಲು ಸಾಧ್ಯವಾಗುತ್ತದೆ ಎಂದು ಶಿವಕುಮಾರ್‌ ವಾದ ಮಾಡಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಚುನಾವಣೆ ನಂತರ ನಿರ್ಧಾರ ಕೈಗೊಳ್ಳೋಣ ಎಂದು ವೇಣುಗೋಪಾಲ್‌ ಆಶ್ವಾಸನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ