
ಬೆಂಗಳೂರು : ಸಚಿವ ಡಿ.ಕೆ.ಶಿವಕುಮಾರ್ ಮತ್ತವರ ತಂಡವು ಹಣ ಸಾಗಣೆಗಾಗಿ ಕೋಡ್ವರ್ಡ್ ಬಳಕೆ ಮಾಡಿದೆ ಎಂದೂ ಐಟಿ ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಒಂದು ಲಕ್ಷ ರು.ಗೆ ಒಂದು ಕೇಜಿ ಎಂಬ ಪದ ಪ್ರಯೋಗ ಮಾಡಲಾ ಗುತ್ತಿತ್ತು. ಹಣ ಸಾಗಣೆಗಾಗಿ ರುಪಾಯಿ ಪದ ಬಳಕೆ ಮಾಡುತ್ತಿರಲಿಲ್ಲ.
ಬದಲಿಗೆ ಕೇಜಿ ಕೋಡ್ವರ್ಡ್ನಲ್ಲಿ ಹಣದ ಸಾಗಣೆ ಮಾಡಲಾಗುತ್ತಿತ್ತು ಎಂದು ಐಟಿ ಅಧಿಕಾರಿಗಳಿಗೆ ರಾಜೇಂದ್ರ ಹೇಳಿಕೆ ನೀಡಿದ್ದಾರೆ. ಆದರೆ, ಸುನೀಲ್ ಕುಮಾರ್ ಶರ್ಮಾ ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ. ಸರಕು ಸಾಗಣೆಗಳ ಬಳಕೆಗಾಗಿ ಕೇಜಿ ಪದ ಬಳಕೆ ಮಾಡಲಾಗುತ್ತಿತ್ತು ಎಂದು ಹೇಳಿದ್ದಾರೆ. ಇತರರನ್ನು ವಿಚಾರಣೆ ನಡೆಸಿದಾಗ ಕೇಜಿ ಕೋಡ್ವರ್ಡ್ ಹಣಕ್ಕಾಗಿ ಬಳಕೆಯಾಗುತ್ತಿರುವುದು ಖಚಿತ ಎಂಬ ಮಾಹಿತಿ ಲಭ್ಯವಾಗಿದೆ ಎಂದು ದೂರಿನಲ್ಲಿ ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಹವಾಲ ಮೂಲಕ ಹಣ
ಆರೋಪಿ ಸುನೀಲ್ ಕುಮಾರ್ ಶರ್ಮಾ ಅವರನ್ನು ವಿಚಾರಣೆಗೊಳಪಡಿಸಿದಾಗ ಸಚಿವ ಡಿ.ಕೆ.ಶಿವಕುಮಾರ್ ತಂಡವು ಹವಾಲಾ ದಂಧೆಯಲ್ಲಿ ತೊಡಗಿರುವುದು ಸಹ ಬೆಳಕಿಗೆ ಬಂದಿದೆ. ಹಣ ಸಾಗಣೆಯಲ್ಲಿ ಈ ದಂಧೆಯು ಪ್ರಮುಖ ಪಾತ್ರವಹಿಸುತ್ತಿರುವುದು ತನಿಖೆ ವೇಳೆ ಗೊತ್ತಾಗಿದೆ ಎಂದು ಐಟಿ ಅಧಿಕಾರಿಗಳು ಹೇಳಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.