
ಬೆಂಗಳೂರು (ಅ.02): ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರಮೇಶ್ವರ್ ಮತ್ತು ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ಬೆಂಗಳೂರಿಗೆ ಸಂಜೆ ಆಗಮಿಸಿದ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಭೇಟಿ ಮಾಡಿ ಸಿದ್ದರಾಮಯ್ಯ ವರ್ತನೆ ವಿರುದ್ಧ ದೂರಿದ್ದಾರೆ.
ನಗರಕ್ಕೆ ಆಗಮಿಸಿದ ವೇಣುಗೋಪಾಲರನ್ನು ಕೆಕೆ ಗೇಸ್ಟೌಸ್ ನಲ್ಲಿ ಭೇಟಿ ಮಾಡಿದ ಪರಮೇಶ್ವರ್ ಮತ್ತು ಶಿವಕುಮಾರ್, ಸಿಎಂಗೆ ಬುದ್ದಿವಾದ ಹೇಳುವಂತೆ ಮನವಿ ಮಾಡಿದ್ದಾರೆ. ಚುನಾವಣೆಗೂ ಮುನ್ನ ಸಿಎಂ ಅಭ್ಯರ್ಥಿ ಘೋಷಣೆ ಮಾಡೋ ಸಂಪ್ರದಾಯ ಕಾಂಗ್ರೆಸ್ ನಲ್ಲಿಲ್ಲ. ಆದ್ರೆ ಸಿಎಂ ಹೋದಲ್ಲಿ, ಬಂದಲ್ಲಿ ಮುಂದಿನ ಸಿಎಂ ನಾನೇ ಅಂತಾ ಹೇಳೋ ಮೂಲಕ ಪಕ್ಷ ಕಾಪಾಡಿಕೊಂಡು ಬಂದಿರುವ ಸಂಪ್ರದಾಯವನ್ನ ಮುರಿಯುತ್ತಿದ್ದಾರೆ. ಚುನಾವಣೆಗೂ ಮುನ್ನ ಹೀಗೆ ಹೇಳಿಕೊಂಡು ಓಡಾಡೋದು ಎಷ್ಟು ಸರಿ ? ಪಕ್ಷ ಇಬ್ಭಾಗವಾಗೋದನ್ನ ಕೂಡಲೇ ತಡೆಯಿರಿ ಅಂತಾ ಹೇಳಿದ್ದಾರೆ. ಇದಕ್ಕೆ ರಿಯಾಕ್ಟ್ ಮಾಡಿದ ವೇಣುಗೋಪಾಲ, ಕೂಲಾಗಿರಿ, ಸಿದ್ದರಾಮಯ್ಯಗೆ ನಾನೇಲ್ಲ ಹೇಳ್ತೇನೆ. ಅನ್ನೋ ಮೂಲಕ ಸಮಾಧಾನ ಪಡಿಸಿದ್ದಾರೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಮತ್ತು ಪರಮೇಶ್ವರ್ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.