
ಮೈಸೂರು (ಮಾ. 15): ಕೃಷ್ಣರಾಜ ಕ್ಷೇತ್ರದ ಮತದಾರರ ಪಟ್ಟಿಯ ಲೋಪ ವಿರುದ್ಧ ಕೇಸ್ ದಾಖಲಿಸಿದ 24 ಗಂಟೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಅವರ ವರ್ಗಾವಣೆ ಆಗಿದೆ ಎಂದು ಮಾಜಿ ಸಚಿವ, ಬಿಜೆಪಿ ಟಿಕೆಟ್ ಆಕಾಂಕ್ಷಿ ಎಸ್.ಎ.ರಾಮದಾಸ್ ಗಂಭೀರ ಆರೋಪ ಮಾಡಿದ್ದಾರೆ.
ಕೃಷ್ಣರಾಜ ಕ್ಷೇತ್ರದ ಮತದಾರರ ಪಟ್ಟಿಗೆ ಕಾಂಗ್ರೆಸ್ ಕಚೇರಿಯಲ್ಲಿ ಕುಳಿತುಕೊಂಡು ಒಬ್ಬನೇ ವ್ಯಕ್ತಿ 11 ಸಾವಿರ ಅರ್ಜಿ ಭರ್ತಿ ಮಾಡಿದ್ದಾನೆ. ಈ ಬಗ್ಗೆ ನಾನು ದೂರು ನೀಡಿದ್ದೆ. ರಂದೀಪ್ ಅವರು ಸರಸ್ವತಿಪುರಂ ಠಾಣೆಯಲ್ಲಿ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಿದ್ದರು. ರಾಜ್ಯ ಸರ್ಕಾರ ಇದನ್ನು ತಡೆಯುವ ಯತ್ನ ನಡೆಸಿತ್ತು. ಕೃಷ್ಣರಾಜ ಮಾತ್ರವಲ್ಲ, ಚಾಮುಂಡೇಶ್ವರಿ, ಚಾಮರಾಜ ಸೇರಿದಂತೆ ಕೆಲ ಕ್ಷೇತ್ರಗಳ ಚುನಾವಣಾ ಅಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಲು ಮುಂದಾಗಿತ್ತು. ಇದೇ ಕಾರಣಕ್ಕಾಗಿ ಡಿ.ರಂದೀಪ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಮಾಜಿ ಸಚಿವ ಎಸ್.ಎ.ರಾಮದಾಸ್ ಆರೋಪ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.