ಡಿ.ರೂಪಾ ವಿರುದ್ಧ 20 ಕೋಟಿ ರು. ಮಾನನಷ್ಟ ಮೊಕದ್ದಮೆ : ವಿಚಾರಣೆ ಎದುರಿಸಲು ಸಿದ್ಧ

Published : Dec 17, 2017, 10:49 AM ISTUpdated : Apr 11, 2018, 12:43 PM IST
ಡಿ.ರೂಪಾ ವಿರುದ್ಧ 20 ಕೋಟಿ ರು. ಮಾನನಷ್ಟ ಮೊಕದ್ದಮೆ : ವಿಚಾರಣೆ ಎದುರಿಸಲು ಸಿದ್ಧ

ಸಾರಾಂಶ

ರಸ್ತೆ ಸುರಕ್ಷತೆ ಮತ್ತು ಸಾರಿಗೆ ವಿಭಾಗದ ಆಯುಕ್ತೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಡಿ. ರೂಪಾ ವಿರುದ್ಧ ನಿವೃತ್ತ ಡಿಜಿಪಿ ಸತ್ಯನಾರಾಯಣ ರಾವ್ ದಾಖಲಿಸಿರುವ ಮಾನ ನಷ್ಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ 18ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ವಕಾಲತ್ತು ಸಲ್ಲಿಸಲಾಗಿದೆ.

ಬೆಂಗಳೂರು (ಡಿ.17): ರಸ್ತೆ ಸುರಕ್ಷತೆ ಮತ್ತು ಸಾರಿಗೆ ವಿಭಾಗದ ಆಯುಕ್ತೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಡಿ. ರೂಪಾ ವಿರುದ್ಧ ನಿವೃತ್ತ ಡಿಜಿಪಿ ಸತ್ಯನಾರಾಯಣ ರಾವ್ ದಾಖಲಿಸಿರುವ ಮಾನ ನಷ್ಟಪ್ರಕರಣಕ್ಕೆ ಸಂಬಂಧಪಟ್ಟಂತೆ 18ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ವಕಾಲತ್ತು ಸಲ್ಲಿಸಲಾಗಿದೆ. ಪ್ರಕರಣ ಸಂಬಂಧ ಶನಿವಾರ ವಿಚಾರಣೆ ನಡೆಸಿದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಫೆ.16ಕ್ಕೆ ಮುಂದೂಡಿದೆ.

ರೂಪಾ ಅವರ ಪರವಾಗಿ ವಕೀಲರು ವಕಾಲತ್ತು ಸಲ್ಲಿಕೆ ಮಾಡಿದ್ದು, ವಿಚಾರಣೆ ಎದುರಿಸಲು ತೀರ್ಮಾನಿಸಿದ್ದಾರೆ. ಬಂಧಿಖಾನೆ ಇಲಾಖೆಯ ಡಿಐಜಿಯಾಗಿದ್ದ ಡಿ.ರೂಪಾ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿನ ಅಕ್ರಮಗಳನ್ನು ಕಳೆದ ಜುಲೈ ತಿಂಗಳಲ್ಲಿ ಬಯಲಿಗೆಳೆದಿದ್ದರು. ಅಲ್ಲದೇ, ಬಂಧಿತರಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ವಿಶೇಷ ಸೌಲಭ್ಯ ಕಲ್ಪಿಸಲು ಡಿಜಿಪಿಯಾಗಿದ್ದ ಸತ್ಯನಾರಾಯಣ ರಾವ್ ಎರಡು ಕೋಟಿ ರು. ಲಂಚ ಪಡೆದಿದ್ದರು ಎಂದು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ 20 ಕೋಟಿ ರು. ಮಾನನಷ್ಟ ಮೊಕದ್ದಮೆಯನ್ನು ಸತ್ಯನಾರಾಯಣರಾವ್ ದಾಖಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಟ್ರೆಂಡ್ ಶುರು ಮಾಡಿದ್ದು ಮೆಹಬೂಬಾ: ನಿತೀಶ್‌ಕುಮಾರ್ ಬುರ್ಖಾ ಎಳೆದಿದ್ದಕ್ಕೆ ಮುಫ್ತಿಗೆ ಒಮರ್ ಟಾಂಗ್
ದರ್ಶನ್ ಭೇಟಿಗೆ, ಪವಿತ್ರಾ ಗೌಡ ಪರಿಪರಿಯಾಗಿ ಬೇಡಿಕೊಂಡರೂ ಡಿಜಿಪಿ ಅಲೋಕ್ ಕುಮಾರ್ ನಿರಾಕರಿಸಿದ್ದೇಕೆ!