
ಮುಂಬೈ (ಡಿ.16): ಆಮೆಗತಿಯಲ್ಲಿ ಸಾಗುತ್ತಿರುವ ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದ ಸಿಬಿಐ ತನಿಖೆಯಿಂದ ಬಾಂಬೆ ಹೈಕೋರ್ಟ್ ಅಸಮಾಧಾನಗೊಂಡಿದ್ದು ಜ. 20ರೊಳಗೆ ಸಂಪೂರ್ಣ ವರದಿ ನೀಡುವಂತೆ ಸಿಬಿಐಗೆ ಹೇಳಿದೆ.
ಈ ತಿಂಗಳ ಆರಂಭದಲ್ಲಿ ಸಿಬಿಐ, ಬಾಂಬೆ ಹೈಕೋರ್ಟ್ ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿ ತನಿಖೆಗೆ ತಡೆ ನೀಡಬೇಕು ಎಂದು ಕೋರಿತ್ತು. ಜೊತೆಗೆ ಹೆಚ್ಚಿನ ಪುರಾವೆ ಒದಗಿಸಲು ಕಾಲಾವಕಾಶ ಬೇಕು ಎಂದು ಕೋರಿತ್ತು.
2013 ಆ. 20 ರಂದು ಪುಣೆಯಲ್ಲಿ ದಾಬೋಲ್ಕರ್ ಹತ್ಯೆ ನಡೆದಿತ್ತು. ಹತ್ಯೆಗೆ ಸಂಬಂಧಿಸಿದಂತೆ ಸಿಬಿಐ ವೀರೇಂದ್ರ ಸಿಂಗ್ ತಾವಡೆಯವರನ್ನು ಬಂಧಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.