ಸಹಜ ಸ್ಥಿತಿಯತ್ತ ದಕ್ಷಿಣ ಕನ್ನಡ ಜಿಲ್ಲೆ: ನಿಲ್ಲದ ರಾಜಕೀಯ ಕೆಸರೆರಚಾಟ, ಆರೋಪ ಪ್ರತ್ಯಾರೋಪದಲ್ಲಿ ನಾಯಕರು

Published : Jul 12, 2017, 08:34 AM ISTUpdated : Apr 11, 2018, 12:51 PM IST
ಸಹಜ ಸ್ಥಿತಿಯತ್ತ ದಕ್ಷಿಣ ಕನ್ನಡ ಜಿಲ್ಲೆ: ನಿಲ್ಲದ ರಾಜಕೀಯ ಕೆಸರೆರಚಾಟ, ಆರೋಪ ಪ್ರತ್ಯಾರೋಪದಲ್ಲಿ ನಾಯಕರು

ಸಾರಾಂಶ

ಬಂಟ್ವಾಳದಲ್ಲಿ  ನಡೆದ ಗಲಭೆ ಪ್ರಕರಣ ರಾಜಕೀಯ ಸಂಘರ್ಷಕ್ಕೆ ತಿರುಗಿದೆ. ಕರಾವಳಿಯಲ್ಲಿ  ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದರೂ, ರಾಜಕೀಯ ನಾಯಕರ ವಾಕ್ಸಮರ ಮಾತ್ರ ನಿಂತಿಲ್ಲ. ಸೋಮವಾರದಂದು ಸಂಸದೆ ಶೋಭಾ ಕರಂದ್ಲಾಜೆ, ಗಲಭೆ ನಡೆಯುತ್ತಿದ್ದರೂ ಕೈಕೊಟ್ಟಿ ಕುಳಿತುಕೊಳ್ಳಲು ದಕ್ಷಿಣ ಕನ್ನಡ ಜಿಲ್ಲೆಯವರೇನೂ ಷಂಡರಾ ಅಂತಾ ಹೇಳಿದ್ದರು. ಇದಕ್ಕೆ ಸಿಎಂ ನಿನ್ನೆ ತಿರುಗೇಟು ನೀಡಿದ್ದಾರೆ.

ಮಂಗಳೂರು(ಜು.12): ಬಂಟ್ವಾಳದಲ್ಲಿ  ನಡೆದ ಗಲಭೆ ಪ್ರಕರಣ ರಾಜಕೀಯ ಸಂಘರ್ಷಕ್ಕೆ ತಿರುಗಿದೆ. ಕರಾವಳಿಯಲ್ಲಿ  ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದರೂ, ರಾಜಕೀಯ ನಾಯಕರ ವಾಕ್ಸಮರ ಮಾತ್ರ ನಿಂತಿಲ್ಲ. ಸೋಮವಾರದಂದು ಸಂಸದೆ ಶೋಭಾ ಕರಂದ್ಲಾಜೆ, ಗಲಭೆ ನಡೆಯುತ್ತಿದ್ದರೂ ಕೈಕೊಟ್ಟಿ ಕುಳಿತುಕೊಳ್ಳಲು ದಕ್ಷಿಣ ಕನ್ನಡ ಜಿಲ್ಲೆಯವರೇನೂ ಷಂಡರಾ ಅಂತಾ ಹೇಳಿದ್ದರು. ಇದಕ್ಕೆ ಸಿಎಂ ನಿನ್ನೆ ತಿರುಗೇಟು ನೀಡಿದ್ದಾರೆ.

ನಿನ್ನೆ ಕೂಡಾ ಸಿಎಂ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು. ಕಾನೂನು ಸುವ್ಯವಸ್ಥೆ ಕಾಪಾಡೋದಕ್ಕೆ ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಅಂತ ಕಿಡಿಕಾರಿದರು. ಮಂಗಳೂರಿಗೆ ನೀವೇ ಹೋಗಿ ಅಂತಾ ಕಾನೂನು ಸಲಹೆಗಾರ ಕೆಂಪಯ್ಯಗೆ ಸಿಎಂ ಸೂಚಿಸಿರುವುದು , ಅಧಿಕಾರಿಗಳ ಆತ್ಮವಿಶ್ವಾಸವನ್ನು ಕುಗ್ಗಿಸಿದೆ ಅಂತಾ ಬಿ.ಎಸ್. ಯಡಿಯೂರಪ್ಪ  ಆರೋಪಿಸಿದರು .

ರಾಜ್ಯದಲ್ಲಿ  ಸರ್ಕಾರ ಇದೆಯೋ ಅಥವಾ ಇಲ್ಲವೋ ಅನ್ನೋ ವಾತಾವರಣ ನಿರ್ಮಾಣವಾಗಿದೆ. ಷಂಡ ಪದ ಬಳಕೆ ಮೂಲಕ ಶೋಭಾ ಕರಂದ್ಲಾಜೆ ಸೌಹಾರ್ಧತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೂಡಾ ಹರಿಹಾಯ್ದಿದ್ದಾರೆ

ಒಟ್ಟಿನಲ್ಲಿ ಕರಾವಳಿ ಶಾಂತಿ ಸಹಜ ಸ್ಥಿತಿಗೆ ಮರಳಿದರೂ, ರಾಜಕೀಯ ನಾಯಕರ ಕೆಸರೆರಚಾಟ ಮಾತ್ರ ನಿಂತಿಲ್ಲ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಮನೂರು ಶಿವಶಂಕರಪ್ಪ ನಿಧನ; ತಿರುಪತಿ ಪ್ರಯಾಣ ರದ್ದು, ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್ ಕುಟುಂಬ ತಕ್ಷಣ ವಾಪಸ್!
ಹೊಸಕೋಟೆಗೆ ಕಾಂಗ್ರೆಸ್‌ ಅವಧಿಯಲ್ಲೇ ಮೆಟ್ರೋ, ಶೀಘ್ರದಲ್ಲೇ ಸಿಗಲಿದೆಯೇ ಸಿಹಿ ಸುದ್ದಿ, ಯಾವ ಮಾರ್ಗ ವಿಸ್ತರಣೆ?