
ನವದೆಹಲಿ[ಏ.11]: ಬೌದ್ಧರ ಧರ್ಮ ಗುರು ದಲೈಲಾಮಾ (83), ಎದೆ ಸೋಂಕಿನಿಂದ ಬಳಲುತ್ತಿದ್ದು, ಅವರನ್ನು ಇಲ್ಲಿನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇನ್ನೂ ಕೆಲವು ದಿನ ಅವರಿಗೆ ಚಿಕಿತ್ಸೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಸೋಮವಾರವಷ್ಟೇ ಹಿಮಾಚಲಪ್ರದೇಶದ ಧರ್ಮಶಾಲಾಕ್ಕೆ ಮರಳಿದ್ದ ದಲೈಲಾಮಾ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಪರಿಶೀಲನೆಗೆಂದು ದೆಹಲಿಗೆ ಕರೆತಂದ ವೇಳೆ ಎದೆ ಸೋಂಕು ಪತ್ತೆಯಾಗಿದೆ.
ಈ ನಡುವೆ ನೂತನ ದಲೈಲಾಮಾರ ಆಯ್ಕೆ ತನ್ನ ಅನುಮತಿ ಇಲ್ಲದೇ ಆಗುವಂತಿಲ್ಲ ಎಂದು ಚೀನಾ ಬುಧವಾರ ಪ್ರತಿಕ್ರಿಯೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.