ಕುದುರೆ ಮೇಲೆ ಮೆರವಣಿಗೆ: ದಲಿತ ವರನಿಗೆ ಮೇಲ್ಜಾತಿಯವರಿಂದ ಹಲ್ಲೆ!

Published : Dec 17, 2018, 11:41 AM IST
ಕುದುರೆ ಮೇಲೆ ಮೆರವಣಿಗೆ: ದಲಿತ ವರನಿಗೆ ಮೇಲ್ಜಾತಿಯವರಿಂದ ಹಲ್ಲೆ!

ಸಾರಾಂಶ

ಕುದುರೆ ಮೇಲೆ ಮೆರವಣಿಗೆ ಹೊರಟ ದಲಿತ ವರನನ್ನು ಮೇಲ್ಜಾತಿಯವರು ಹುಗ್ಗಾಮುಗ್ಗ ಥಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ,

ಆಗ್ರಾ[ಡಿ,17]: ವಿವಾಹದ ದಿನದಂದು ಸಂಪ್ರದಾಯದ ಪ್ರಕಾರ ಕುದುರೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ದಲಿತ ವರನ ಮೇಲೆ ದಾಳಿ ನಡೆಸಿ, ಆತನನ್ನು ಕುದುರೆ ಮೇಲಿಂದ ಕೆಳಗಿಳಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಲ್ಲದೆ, ಠಾಕೂರ್‌ ಸಮುದಾಯದವರು ತಮ್ಮ ಮೇಲೆ ಕಲ್ಲು ತೂರಾಟ ಮತ್ತು ಜಾತಿನಿಂದನೆ ಮಾಡಿದ್ದಾರೆ ಎಂದು ವರನ ಕಡೆಯವರು ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದಾರೆ. 

ಇಲ್ಲಿನ ಕಾಸರ್‌ಗಂಜ್‌ ಜಿಲ್ಲೆಯ ಅಸ್ರೌಲಿ ಗ್ರಾಮದಲ್ಲಿ ದಾಂಪತ್ಯಕ್ಕೆ ಕಾಲಿಡಬೇಕಾದ ನವ ವರ ಕಲ್ಯಾಣ ಮಂಟಪಕ್ಕೆ ಕುದುರೆ ಮೆರವಣಿಗೆಯಲ್ಲಿ ಸಾಗುತ್ತಿದ್ದ. ಈ ವೇಳೆ ಬಂದ ಇಟಾ ಜಿಲ್ಲೆಯ ಠಾಕೂರ್‌ ಸಮುದಾಯದವರು, ವರನ ಮೇಲೆ ಮನಸ್ಸೋ ಇಚ್ಚೆ ದಾಳಿ ಮಾಡಿ, ಕುದುರೆ ಮೇಲಿಂದ ಕೆಳಗಿಳಿಸಿ, ಕಲ್ಯಾಣ ಮಂಟಪಕ್ಕೆ ನಡೆಸಿಕೊಂಡೇ ಕರೆದೋಗಿದ್ದಾರೆ. ಅಲ್ಲದೆ, ಮೆರವಣಿಗೆಯಲ್ಲಿ ಭಾಗಿಯಾಗಿದ್ದ ದಲಿತರ ಮೇಲೆ ಕಲ್ಲು ತೂರಾಟ ಹಾಗೂ ಜಾತಿನಿಂದನೆ ಸಹ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಆದರೆ, ಅಂದು ಅಸ್ರೌಲಿ ಗ್ರಾಮದಲ್ಲಿ ದಲಿತ ಮತ್ತು ಠಾಕೂರ್‌ ಸಮುದಾಯದ ಎರಡು ವಿವಾಹಗಳು ನಿಶ್ಚಯವಾಗಿದ್ದವು. ಹಾಗಾಗಿ, ಮೊದಲಿಗೆ ಠಾಕೂರ್‌ ಸಮುದಾಯದವರು ವರನನ್ನು ಕುದುರೆ ಮೇಲೆ ಮೆರವಣಿಗೆ ಮಾಡಿದ್ದರು. ಅದೇ ರೀತಿ, ದಲಿತರೂ ಸಹ ವರನನ್ನು ಕುದುರೆ ಮೇಲೆ ಮೆರವಣಿಗೆ ಮಾಡಿದ್ದಕ್ಕೆ, ಈ ಗಲಾಟೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಅಲ್ಲದೆ, ತಮ್ಮನ್ನು ಸುಳ್ಳು ಕೇಸ್‌ನಲ್ಲಿ ಸಿಲುಕಿಸುವುದಾಗಿ ದಲಿತರು ತಮ್ಮ ಮೇಲೆ ಬೆದರಿಕೆ ಹಾಕಿದ್ದರು ಎಂದು ಠಾಕೂರ್‌ ಸಮುದಾಯದವರು ಪ್ರತಿ ದೂರು ಸಲ್ಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು