ಚುನಾವಣೆಗೂ ಮುನ್ನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಕಿತ್ತಾಟ; ಮೋಯ್ಲಿ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Published : Mar 21, 2018, 01:04 PM ISTUpdated : Apr 11, 2018, 12:53 PM IST
ಚುನಾವಣೆಗೂ ಮುನ್ನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಕಿತ್ತಾಟ; ಮೋಯ್ಲಿ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

ಸಾರಾಂಶ

ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಆರೋಪ ಪ್ರತ್ಯಾರೋಪ ಜೋರಾಗಿದೆ. 

ಬೆಂಗಳೂರು (ಮಾ. 21): ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಆರೋಪ ಪ್ರತ್ಯಾರೋಪ ಜೋರಾಗಿದೆ. 
ಮಹಾದೇವಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರ ಅಸಮಾಧಾನ ಭುಗಿಲೆದ್ದಿದೆ.  ಕಳೆದ ಬಾರಿಯ ಅಭ್ಯರ್ಥಿ ಎ.ಸಿ.ಶ್ರೀನಿವಾಸ್ ಮತ್ತು ವೀರಪ್ಪ ಮೊಯ್ಲಿ ವಿರುದ್ಧ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. 

ವೀರಪ್ಪ ಮೊಯ್ಲಿ ವಿರುದ್ಧ ಬೆಂಗಳೂರಿನಲ್ಲಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಮಹಾದೇವಪುರ ಕ್ಷೇತ್ರದಲ್ಲಿ ಸ್ಥಳೀಯರಿಗೆ ಅವಕಾಶ ನೀಡುವಂತೆ ಆಗ್ರಹಿಸಿವೆ. ಕಳೆದ ಬಾರಿಯ ಅಭ್ಯರ್ಥಿ ಎ.ಸಿ.ಶ್ರೀನಿವಾಸ್ ಪರವಾಗಿರುವ ವೀರಪ್ಪ ಮೊಯ್ಲಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  ವೀರಪ್ಪ ಮೊಯ್ಲಿ ಅವರು ಸ್ಥಳೀಯರಲ್ಲದ ಎ.ಸಿ.ಶ್ರಿನಿವಾಸ್ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಸ್ಥಳೀಯ ದಲಿತ ನಾಯಕರ ವಿರುದ್ಧ ವೀರಪ್ಪ ಮೊಯ್ಲಿ ಕೆಲಸ ಮಾಡುತ್ತಿದ್ದಾರೆ. ತಕ್ಷಣವೇ ಮೊಯ್ಲಿಯನ್ನು ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು. ಎ.ಸಿ.ಶ್ರೀನಿವಾಸ ಬದಲು ಸ್ಥಳೀಯರಿಗೆ ಮಹಾದೇವಪುರದಲ್ಲಿ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ  ಬೆಂಗಳೂರಿನ ಮೌರ್ಯ ಹೊಟೇಲ್ ಸರ್ಕಲ್ ಬಳಿ  ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಲ್ಲಿ ಯಾವುದೇ ದಾಖಲೆ ಇಲ್ಲದೆ ಆಟೋ ಓಡಿಸ್ತಿದ್ದಾರಾ ಬಾಂಗ್ಲಾದವ್ರು? ತಮ್ಮವರಿಗೆ ವಿಡಿಯೋ ಮೂಲಕ ಕರೆದ ಯುವಕರು!
ರಾಯಚೂರು: ಬಸ್ ಇಲ್ಲದೆ ರಾತ್ರಿವರೆಗೆ ಪರದಾಡಿದ ಶಾಲಾ ಮಕ್ಕಳು; ಅಧಿಕಾರಿಗಳಿಗೆ ಬೆವರಿಳಿಸಿದ ಶಾಸಕಿ ಕರೆಮ್ಮ ನಾಯಕ್!