
ಅಹಮದಾಬಾದ್: ಗುಜರಾತ್ನ ಆನಂದ್ ಜಿಲ್ಲೆಯಲ್ಲಿ ಗರ್ಬಾ ನೃತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ 21ರ ಹರೆಯದ ದಲಿತ ಯುವಕನನ್ನು ಗುಂಪೊಂದು ಹೊಡೆದು ಸಾಯಿಸಿದ ಘಟನೆ ನಡೆದಿದೆ. ಜಯೇಶ್ ಸೋಳಂಕಿ ಮತ್ತು ಇತರ ಮೂವರು ದಲಿತ ಯುವಕರು ಭದ್ರಾನಿಯಾ ಗ್ರಾಮದ ದೇವಸ್ಥಾನದ ಸಮೀಪದ ಮನೆಯೊಂದರ ಬಳಿ ಕುಳಿತು ಗರ್ಬಾ ನೋಡುತ್ತಿದ್ದರು.
ಈ ವೇಳೆ ಆರೋಪಿಗಳು, ದಲಿತರಿಗೆ ಗರ್ಬಾ ನೋಡುವ ಹಕ್ಕಿಲ್ಲ ಎಂದು ಜಾತಿ ನಿಂದನೆ ಮಾಡಿ, ದಲಿತರ ಮೇಲೆ ಹಲ್ಲೆ ನಡೆಸಿದರು. ತಲೆಗೆ ಏಟಾದ ಜಯೇಶ್ ಸಾವಿಗೀಡಾಗಿದ್ದಾನೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.