ಭಕ್ತರ ಬೆನ್ನ ಮೇಲೆ ದಲಿತ ಪೂಜಾರಿಯ ಪಾದಯಾತ್ರೆ

Published : Dec 18, 2017, 10:55 AM ISTUpdated : Apr 11, 2018, 01:00 PM IST
ಭಕ್ತರ ಬೆನ್ನ ಮೇಲೆ ದಲಿತ ಪೂಜಾರಿಯ ಪಾದಯಾತ್ರೆ

ಸಾರಾಂಶ

ದಲಿತ ಪೂಜಾರಿಯ ಪಾದ ಸ್ಪರ್ಶಕ್ಕೆ ಮೈಯೊಡ್ಡಿ ಹರಕೆ ತೀರಿಸುವ ಸರ್ವ ಜನಾಂಗದ ಭಕ್ತರ ವಿಶಿಷ್ಟ ಸಂಪ್ರದಾಯ ತಾಲೂಕಿನ ಅರಸಿಕೇರಿ ದಂಡಿ ದುರುಗಮ್ಮನ ಜಾತ್ರೆಯಲ್ಲಿ ಭಾನುವಾರ ನಡೆಯಿತು.

ಹರಪನಹಳ್ಳಿ (ಡಿ.18): ದಲಿತ ಪೂಜಾರಿಯ ಪಾದ ಸ್ಪರ್ಶಕ್ಕೆ ಮೈಯೊಡ್ಡಿ ಹರಕೆ ತೀರಿಸುವ ಸರ್ವ ಜನಾಂಗದ ಭಕ್ತರ ವಿಶಿಷ್ಟ ಸಂಪ್ರದಾಯ ತಾಲೂಕಿನ ಅರಸಿಕೇರಿ ದಂಡಿ ದುರುಗಮ್ಮನ ಜಾತ್ರೆಯಲ್ಲಿ ಭಾನುವಾರ ನಡೆಯಿತು. ಅರಸಿಕೇರಿ ಗ್ರಾಮ ಅಂದಾಜು ಆರು ಸಾವಿರ ಜನಸಂಖ್ಯೆಯುಳ್ಳ ಹೋಬಳಿ ಕೇಂದ್ರ. ಇಲ್ಲಿ ಪ್ರತಿವರ್ಷ ಡಿಸೆಂಬರ್-ಜನವರಿಯಲ್ಲಿ 3 ದಿನಗಳ ಕಾಲ ದಂಡಿ ದುರುಗಮ್ಮನ ಜಾತ್ರೆ ಜರುಗುತ್ತದೆ. ಜಾತ್ರೆಯ 3ನೇ ದಿನ ದಲಿತ ಪೂಜಾರಿಯ ಪಾದ ಸ್ಪರ್ಶಕ್ಕೆ ಮೈಯೊಡ್ಡುವ ಕಾರ್ಯಕ್ರಮ ನಡೆಯುವುದು ವಿಶೇಷ.

ಬೆಳಗಿನ ಜಾವ ದೇವಸ್ಥಾನದಿಂದ ದಂಡಿನ ದುರುಗಮ್ಮ ದೇವಿಯನ್ನು 2 ಕಿ.ಮೀ. ದೂರದ ಹೊಳೆ (ಹೊಂಡ) ಗಂಗಾಪೂಜೆಗೆ ಕರೆ ತರಲಾಗುತ್ತದೆ. ಪೂಜೆ ಮುಗಿಸಿಕೊಂಡು ದೇವಿಯ ಕೇಲು (ಪೂಜಾ ಸಾಮಗ್ರಿಗಳುಳ್ಳ ಮಡಿಕೆ) ಹೊತ್ತ ಹರಿಜನ ಪೂಜಾರಿ ದೇವಸ್ಥಾನದ ಕಡೆಗೆ ಹೊರಡುತ್ತಾರೆ. ಆಗ ಲಿಂಗಾಯತ, ವಾಲ್ಮೀಕಿ, ಕುರುಬ, ಜಂಗಮ, ಭೋವಿ, ಬಾರಿಕರು, ಶೆಟ್ಟರು, ಬ್ರಾಹ್ಮಣರು, ಗೊಂದಳಿಯರು ಸೇರಿದಂತೆ ಗ್ರಾಮದ ಸುತ್ತಮುತ್ತಲಿನ ಸರ್ವ ಜಾತಿಯ ಭಕ್ತರು ಮಡೆಯಿಂದ ರಸ್ತೆ ಮಧ್ಯೆ ಬೋರಲಾಗಿ ಮಲಗಿಕೊಳ್ಳುತ್ತಾರೆ.

ಅವರ ಬೆನ್ನ ಮೇಲೆ ನಿಧಾನವಾಗಿ ಒಬ್ಬ ಕೇಲು ಹೊತ್ತ ಹರಿಜನ ಪೂಜಾರಿ ನಡೆಯುತ್ತಾ ಸಾಗುತ್ತಾರೆ. ಇದೇ ರೀತಿ ದೇವಸ್ಥಾನದವರೆಗೆ ಅಂದರೆ ಅಂದಾಜು 2 ಕಿಲೋ ಮೀಟರ್ ಉದ್ದ ನಡಿಗೆ ಸಾಗುತ್ತದೆ. ಕೆಲ ಭಕ್ತರು ಒಂದು ಬಾರಿ ಬೆನ್ನು ತುಳಿಸಿಕೊಂಡರೂ ಮುಂದೆ ಪುನಃ ಹೋಗಿ ಇನ್ನೊಮ್ಮೆ ಸರತಿ ಸಾಲಿನಲ್ಲಿ ಮಲಗಿಕೊಂಡು ಬೆನ್ನ ಮೇಲೆ ಪೂಜಾರಿಯ ಪಾದಗಳಿಂದ ತುಳಿಸಿ ಕೊಳ್ಳುತ್ತಾರೆ.

ಈ ಸಂದರ್ಭದಲ್ಲಿ ಬೆನ್ನ ಮೇಲೆ ನಡೆಯುವವ ಸೇರಿ ಒಟ್ಟು 8 ಮಂದಿ ಪೂಜಾರಿಗಳ ತಂಡ ಸಕಲ ವಾದ್ಯ, ಮೇಳಗಳ ಸದ್ದಿನೊಂದಿಗೆ ದೇವಿಯ ಮೂರ್ತಿಯೊಂದಿಗೆ ಹೊಳೆ ಪೂಜೆ ಮುಗಿಸಿಕೊಂಡು ದೇವಸ್ಥಾನಕ್ಕೆ ಸಾಗುತ್ತದೆ. ಅದರಲ್ಲಿ ಒಬ್ಬ ಕೇಲು ಹೊತ್ತುಕೊಂಡ ಪೂಜಾರಿ ಮಾತ್ರ ಈ ರೀತಿ ಭಕ್ತರ ಮೈ ಮೇಲೆ ನಡೆದುಹೋದರೆ ಉಳಿದವರು ಪಕ್ಕಕ್ಕೆ ನಡೆದು ಹೋಗುತ್ತಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲಿಯೋನಲ್ ಮೆಸ್ಸಿಗೆ RM 003-V2 ವಾಚ್ ಉಡುಗೊರೆ, ಇದ್ರ ಬೆಲೆಗೆ 2 ರೋಲ್ಸ್ ರಾಯ್ಸ್ ಕಾರು ಬರುತ್ತೆ
ಮಾದಪ್ಪ ಮೆಸ್‌ನಲ್ಲಿ ಮುದ್ದೆ ಬಡಿಸೋದು ಅಶುಚಿ; ಟೀಕಿಸಿದವರ ಬೌದ್ಧಿಕ ಬಡತನ ಬಯಲಿಗೆಳೆದ ಕಾರ್ತಿಕ್ ರೆಡ್ಡಿ!