ಶಿವಮೊಗ್ಗ: ದಲಿತರಿಗೆ ದೇಗುಲ ಪ್ರವೇಶಕ್ಕೆ ಅಡ್ಡಿ

Published : Oct 07, 2017, 11:57 AM ISTUpdated : Apr 11, 2018, 01:09 PM IST
ಶಿವಮೊಗ್ಗ: ದಲಿತರಿಗೆ ದೇಗುಲ ಪ್ರವೇಶಕ್ಕೆ ಅಡ್ಡಿ

ಸಾರಾಂಶ

ದೇವಸ್ಥಾನದಲ್ಲಿ ಹಾರ ಹಾಕಲು ತೆರಳಿದ ದಲಿತರನ್ನು ಹೊರದಬ್ಬಿದ ಸವರ್ಣೀಯರು | ಘರ್ಷಣೆಯಲ್ಲಿ ಸೈಕಲ್ ಶಾಪ್’ಗೆ ಬೆಂಕಿ

ಶಿವಮೊಗ್ಗ: ದೇವಸ್ಥಾನದಲ್ಲಿರುವ ಆಂಜನೇಯ ಸ್ವಾಮಿಗೆ ಹಾರ ಹಾಕಲು ಅವಕಾಶ ನೀಡದ್ದಕ್ಕೆ ದಲಿತರು-ಸವರ್ಣೀಯರ ನಡುವೆ ಘರ್ಷಣೆ ನಡೆದು, ಸೈಕಲ್ ಶಾಪ್ ಸುಟ್ಟು ಹಾಕಿದ ಘಟನೆ ಶಿವಮೊಗ್ಗ ಜಿಲ್ಲೆ ಸಮೀಪದ ಹರಮಘಟ್ಟ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಪೊಲೀಸರು ಗ್ರಾಮದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದು, ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಬಿಗುವಿನ ವಾತಾವರಣ ಮುಂದುವರಿದಿದೆ.

ಗುರುವಾರ ಭೂಮಿ ಹುಣ್ಣಿಮೆ ಹಬ್ಬದ ಹಿನ್ನೆಲೆಯಲ್ಲಿ ಮೆರವಣಿಗೆ ನಡೆಸಿದ ದಲಿತರು ದೇವಸ್ಥಾನಕ್ಕೆ ತೆರಳಿ ಹಾರ ಹಾಕಲು ಮುಂದಾಗಿದ್ದರು. ಇದಕ್ಕೆ ಅವಕಾಶ ನೀಡದ ಸವರ್ಣೀಯರು ದಲಿತರನ್ನು ದೇಗುಲದಿಂದ ಹೊರದಬ್ಬಿದ್ದರಿಂದ ಘರ್ಷಣೆ ಏರ್ಪಟ್ಟಿತು.

ಅಂಬೇಡ್ಕರ್ ಭಾವಚಿತ್ರವಿದ್ದ ಫ್ಲೆಕ್ಸ್ ಹರಿದುಹಾಕಿದ್ದರಿಂದ ಪರಿಸ್ಥಿತಿ ಬಿಗಡಾಯಿಸಿತ್ತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಕ್ಷರ ಲೋಕದ ಅವಧಾನಿ: ಕನ್ನಡ ಅಧ್ಯಾಪಕ ಜಿ.ಬಿ.ಹರೀಶರ ಪತ್ರಿಕಾ ಪ್ರತಿಭೆ
ನಿಮ್ಮ ಆರೋಗ್ಯಕ್ಕೆ ನಿಜವಾದದ್ದೇ ಅರ್ಹತೆ: ನಕಲಿ ಉತ್ಪನ್ನಗಳ ವಿರುದ್ಧ ಹರ್ಬಾಲೈಫ್ ಇಂಡಿಯಾದ ಉಪಕ್ರಮ