
ನವದೆಹಲಿ: ದೇಶದ ಜಲಾಶಯಗಳಲ್ಲಿ ನೀರಿನ ಮಟ್ಟಭಾರಿ ಪ್ರಮಾಣದಲ್ಲಿ ಕುಸಿತ ಅನುಭವಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಕೇಂದ್ರ ಸರ್ಕಾರ ‘ಬರ ಸಲಹಾವಳಿ’ಗಳನ್ನು ನೀಡಿದೆ. ನೀರನ್ನು ವಿವೇಕಯುತವಾಗಿ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದೆ.
ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ಕಳೆದ ವಾರವೇ ಈ ಸಲಹೆ ಬಂದಿದ್ದರೆ, ಶುಕ್ರವಾರ ತಮಿಳುನಾಡಿಗೆ ರವಾನೆಯಾಗಿದೆ ಎಂದು ಕೇಂದ್ರ ಜಲ ಆಯೋಗದ ಸದಸ್ಯ ಎಸ್.ಕೆ. ಹಲ್ದಾರ್ ಅವರು ತಿಳಿಸಿದ್ದಾರೆ.
ಕಳೆದ 10 ವರ್ಷಗಳ ಸರಾಸರಿಗೆ ಹೋಲಿಸಿದಾಗ ಜಲಾಶಯದಲ್ಲಿ ಶೇ.20ಕ್ಕಿಂತ ಕಡಿಮೆ ನೀರು ಇದ್ದಾಗ ಈ ರೀತಿಯ ಸಲಹಾವಳಿಗಳನ್ನು ಕೇಂದ್ರವು ರಾಜ್ಯಗಳಿಗೆ ರವಾನಿಸುತ್ತದೆ. ನೀರು ರಾಜ್ಯಗಳಿಗೆ ಸಂಬಂಧಿಸಿದ ಅಧಿಕಾರವಾಗಿರುವುದರಿಂದ, ಅಣೆಕಟ್ಟೆಗಳಲ್ಲಿ ನೀರಿನ ಮಟ್ಟಕುಸಿದಾಗ ಅಲ್ಲಿನ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಲಹೆ ಮಾಡುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.