
ಬೆಂಗಳೂರು (ಡಿ. 19): ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಲೆ ಮಹದೇಶ್ವರ ಬೆಟ್ಟವನ್ನು ದತ್ತು ತೆಗೆದುಕೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು ಇದಕ್ಕೆ ಅರಣ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ಅರಣ್ಯ ಭೂಮಿಯನ್ನು ಸಾರ್ವಜನಿಕರಿಗೆ ದತ್ತು ನೀಡುವಂತಹ ಯಾವುದೇ ಯೋಜನೆ ರಾಜ್ಯ ಸರ್ಕಾರದಲ್ಲಿಲ್ಲ ಎಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ.
ಅರಣ್ಯ, ಮೀಸಲು ಅರಣ್ಯ ಹಾಗೂ ವನ್ಯಜೀವಿ ಧಾಮಗಳನ್ನು ದತ್ತು ನೀಡುವಂತಹ ಯಾವುದೇ ಯೋಜನೆ ಅರಣ್ಯ ಇಲಾಖೆಯಲ್ಲಿಲ್ಲ. ಆದರೆ, ಅರಣ್ಯ ಇಲಾಖೆಯ ರಾಯಭಾರಿಯಾಗಿರುವ ಚಿತ್ರ ನಟ ದರ್ಶನ್ ಅವರು ಮಲೈ ಮಹದೇಶ್ವರ ವನ್ಯಜೀವಿ ಧಾಮದ ಅರಣ್ಯ ಭೂಮಿ ದತ್ತು ಪಡೆದಿದ್ದಾರೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿದೆ. ಈ ಅಂಶ ಸತ್ಯಕ್ಕೆ ದೂರವಾಗಿದೆ ಎಂದು ಮಲೈ ಮಹದೇಶ್ವರ ವನ್ಯಜೀವಿ ಧಾಮದ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡುಕೊಂಡಲು ತಿಳಿಸಿದ್ದಾರೆ.
ದರ್ಶನ್ ಅವರು ಮಲೈಮಹದೇಶ್ವರ ವನ್ಯಜೀವಿಧಾಮದಲ್ಲಿರುವ ಎರಡು ಕ್ಯಾಂಪ್ಗಳಲ್ಲಿ ಕಾರ್ಯನಿರ್ವಹಿಸುವ ಅರಣ್ಯ ವೀಕ್ಷಕರ ಕಲ್ಯಾಣಕ್ಕಾಗಿ ಹಣ ನೀಡಿದ್ದಾರೆ. ಆದರೆ, ಅರಣ್ಯ ಭೂಮಿ ದತ್ತು ಪಡೆದಿದ್ದಾರೆ ಎಂಬ ಅಂಶ ಸತ್ಯಕ್ಕೆ ದೂರವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.