ಮೇಲುಕೋಟೆ ಕ್ಷೇತ್ರದಿಂದ ಪುಟ್ಟಣ್ಣಯ್ಯ ಪುತ್ರ ಸ್ಪರ್ಧೆ?

Published : Feb 25, 2018, 03:26 PM ISTUpdated : Apr 11, 2018, 12:35 PM IST
ಮೇಲುಕೋಟೆ ಕ್ಷೇತ್ರದಿಂದ ಪುಟ್ಟಣ್ಣಯ್ಯ ಪುತ್ರ ಸ್ಪರ್ಧೆ?

ಸಾರಾಂಶ

ವಿಧಾನಸಭಾ ಚುನಾವಣೆ ವೇಳೆ ಮೇಲುಕೋಟೆಯಿಂದ ಸ್ಪರ್ಧಿಸಬೇಕೋ ಅಥವಾ ಬೇಡವೋ ಎಂಬುದನ್ನು ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚಿಸಿ ತೀರ್ಮಾನ

ಮಂಡ್ಯ: ವಿಧಾನಸಭಾ ಚುನಾವಣೆ ವೇಳೆ ಮೇಲುಕೋಟೆಯಿಂದ ಸ್ಪರ್ಧಿಸಬೇಕೋ ಅಥವಾ ಬೇಡವೋ ಎಂಬುದನ್ನು ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಇತ್ತೀಚೆಗಷ್ಟೇ ನಿಧನರಾದ ಶಾಸಕ ಕೆ.ಎಸ್. ಪುಟ್ಟಣ್ಣಯ್ಯರ ಪುತ್ರ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.

ತಂದೆಯ ನಿಧನದ ನಂತರ ನನ್ನೊಂದಿಗೆ ಸಾಕಷ್ಟು ಹಿರಿಯರು, ಹಿತೈಷಿಗಳು ಮಾತನಾಡಿದ್ದಾರೆ. ಮುಂದಿನ ಭವಿಷ್ಯ ಯಾವ ಹಾದಿಯಲ್ಲಿ ಸಾಗಬೇಕು ಎಂಬುದು ಕೂಡ ನಮಗೂ ಒಂದು ಚರ್ಚೆಯ ಸಂಗತಿಯಾಗಿದೆ. ಹೀಗಾಗಿ ಮುಂದಿನ ಚುನಾವಣೆ ಮತ್ತು ರಾಜಕೀಯ ನಿರ್ಧಾರದ ಚರ್ಚಿಸುವುದಾಗಿ ಹೇಳಿದರು.

ರೈತಸಂಘ ನಾಯಕ, ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಕಳೆದ ಫೆ.18ರಂದು ನಿಧನರಾಗಿದ್ದಾರೆ.  ವಿಧಿವಶರಾಗಿದ್ದಾರೆ. 1994 ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ, ಪುಟ್ಟಣ್ಣಯ್ಯ 2013ರಲ್ಲಿ ಸರ್ವೋದಯ ಪಕ್ಷದಿಂದ ಸ್ಪರ್ಧಿಸಿ 2ನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ರೈತರ ಹಿತಾಸಕ್ತಿ ಕಾಪಾಡಲು,  ಕಾವೇರಿ ನದಿ ನೀರು ವಿಚಾರದಲ್ಲಿ ಪುಟ್ಟಣ್ಣಯ್ಯ ನಿರಂತರ ಹೋರಾಟ ಮಾಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ