ನಾಳೆಯಿಂದ ದತ್ತ ಜಯಂತಿ ಅಭಿಯಾನ ; ಮದ್ಯ ಮಾರಾಟ ನಿಷೇಧ

Published : Dec 19, 2018, 12:06 PM IST
ನಾಳೆಯಿಂದ ದತ್ತ ಜಯಂತಿ ಅಭಿಯಾನ ; ಮದ್ಯ ಮಾರಾಟ ನಿಷೇಧ

ಸಾರಾಂಶ

ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ, ಬಾಬಾಬುಡನ್‌ಗಿರಿಯಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಡಿ.20 ರಿಂದ 22 ರವರೆಗೆ ದತ್ತ ಜಯಂತಿ ಅಭಿಯಾನ ನಡೆಯಲಿದೆ. 

ಚಿಕ್ಕಮಗಳೂರು (ಡಿ. 19): ಜಿಲ್ಲೆಯ ಚಂದ್ರದ್ರೋಣ ಪರ್ವತ, ಬಾಬಾಬುಡನ್‌ಗಿರಿಯಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಡಿ.20 ರಿಂದ 22 ರವರೆಗೆ ದತ್ತ ಜಯಂತಿ ಅಭಿಯಾನ ನಡೆಯಲಿದೆ. 

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಕೆ.ಶ್ರೀರಂಗಯ್ಯ ನಿಬಂಧನೆಗಳನ್ನು ವಿಧಿಸಿ ಅಧಿಸೂಚನೆ ಹೊರಡಿಸಿದ್ದಾರೆ. ಭತ್ರತೆಗಾಗಿ 3200 ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. 43 ವಿಶೇಷ ದಂಡಾಧಿಕಾರಿಗಳನ್ನು ನಿಯೋಜಿಸಲಾಗಿದೆ.

ದತ್ತ ಜಯಂತಿ ಹಿನ್ನಲೆಯಲ್ಲಿ ಡಿ 19 ರಿಂದ 22 ರ ವರೆಗೆ ಮೂರು ದಿನಗಳ ಕಾಲ ಜಿಲ್ಲೆಯಾದ್ಯಂತ ಮದ್ಯಮಾರಾಟ ನಿಷೇಧ ಮಾಡಲಾಗಿದೆ ಎಂದು   ಚಿಕ್ಕಮಗಳೂರು ಜಿಲ್ಲಾಧಿಕಾರಿ ಶ್ರೀರಂಗಯ್ಯ ಆದೇಶ ನೀಡಿದ್ದಾರೆ. 

ನಾಳೆಯಿಂದ ಮೂರು ದಿನ ದತ್ತಜಯಂತಿ ಆಚರಣೆ ಹಿನ್ನೆಲೆ ಮುನ್ನೆಚರಿಕಾ ಕ್ರಮವಾಗಿ ಮದ್ಯಮಾರಾಟ ನಿಷೇಧ ಮಾಡಲಾಗಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ