ಆರ್‌ಎಸ್‌ಎಸ್‌ ಅತ್ಯುನ್ನತ ಸ್ಥಾನಕ್ಕೆ ಕನ್ನಡಿಗ ಹೊಸಬಾಳೆ ನೇಮಕ?

Published : Mar 03, 2018, 08:21 AM ISTUpdated : Apr 11, 2018, 01:00 PM IST
ಆರ್‌ಎಸ್‌ಎಸ್‌ ಅತ್ಯುನ್ನತ ಸ್ಥಾನಕ್ಕೆ ಕನ್ನಡಿಗ ಹೊಸಬಾಳೆ ನೇಮಕ?

ಸಾರಾಂಶ

ಕನ್ನಡಿಗ ದತ್ತಾತ್ರೇಯ ಹೊಸಬಾಳೆ ಅವರು ಶೀಘ್ರವೇ, ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿನ 2ನೇ ಅತ್ಯುನ್ನತ ಹುದ್ದೆಯಾದ ಸರಕಾರ‍್ಯವಾಹಕ್ಕೆ ನೇಮಕಗೊಳ್ಳುವ ಸಾಧ್ಯತೆ ಇದೆ.

ನಾಗಪುರ: ಕನ್ನಡಿಗ ದತ್ತಾತ್ರೇಯ ಹೊಸಬಾಳೆ ಅವರು ಶೀಘ್ರವೇ, ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿನ 2ನೇ ಅತ್ಯುನ್ನತ ಹುದ್ದೆಯಾದ ಸರಕಾರ‍್ಯವಾಹಕ್ಕೆ ನೇಮಕಗೊಳ್ಳುವ ಸಾಧ್ಯತೆ ಇದೆ.

ಮಾ.9-11ರವರೆಗೆ ನಾಗಪುರದಲ್ಲಿ ಆರ್‌ಎಸ್‌ಎಸ್‌ನ ಅಖಿಲ ಭಾರತೀಯ ಪ್ರತಿನಿಧಿ ಸಭಾದ ಸಮ್ಮೇಳನ ನಡೆಯಲಿದ್ದು, ಅಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಹಾಲಿ ಸರಕಾರ‍್ಯವಾಹ ಸ್ಥಾನದಲ್ಲಿರುವ ಭಯ್ಯಾಜಿ ಜೋಷಿ ಅವರು ಆಗಾಗ್ಗೆ ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ, ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಈ ಸ್ಥಾನಕ್ಕೆ ಸಂಘಟನೆಯಲ್ಲಿ ಯುವಸಮೂಹದ ಅಪಾರ ಬೆಂಬಲ ಹೊಂದಿರುವ ದತ್ತಾತ್ರೇಯ ಹೊಸಬಾಳೆ ಅವರನ್ನು ನೇಮಕ ಮಾಡಲು ಸಂಘದ ಹಿರಿಯ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸರಸಂಘಚಾಲಕ, ಆರ್‌ಎಸ್‌ಎಸ್‌ನಲ್ಲಿ ನಂ.1 ಸ್ಥಾನವಾಗಿದ್ದರೆ, ಅದರ ನಂತರದ ಸ್ಥಾನ ಸರಕಾರ‍್ಯವಾಹಕದ್ದು. ಸಂಘದ ಎಲ್ಲಾ ದೈನಂದಿಕ ಕಾರ್ಯಚಟುವಟಿಕೆಗಳನ್ನು ನಂ.2 ಸ್ಥಾನದಲ್ಲಿ ಇರುವವರೇ ನಿರ್ವಹಿಸುತ್ತಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಾಮಾಜಿಕ ಭದ್ರತಾ ಪಿಂಚಣಿಯಲ್ಲಿ 24.55 ಲಕ್ಷ ಅನುಮಾನಾಸ್ಪದ ಫಲಾನುಭವಿಗಳು: ಕೃಷ್ಣ ಬೈರೇಗೌಡ
ಹಂತ ಹಂತವಾಗಿ 1.88 ಲಕ್ಷ ಸರ್ಕಾರಿ ಹುದ್ದೆ ಭರ್ತಿ : ಸಿದ್ದರಾಮಯ್ಯ