ಸೊಸೆಗೆ ಕಿರುಕುಳ ಕೊಟ್ಟರಾ ಕಾಂಗ್ರೆಸ್ ನಾಯಕಿ?: ಅತ್ತೆ ಕಿರುಕುಳಕ್ಕೆ ಬೇಸತ್ತು ಸೊಸೆ ಆತ್ಮಹತ್ಯೆ ಶಂಕೆ

Published : Jan 24, 2017, 10:15 AM ISTUpdated : Apr 11, 2018, 12:45 PM IST
ಸೊಸೆಗೆ ಕಿರುಕುಳ ಕೊಟ್ಟರಾ ಕಾಂಗ್ರೆಸ್ ನಾಯಕಿ?: ಅತ್ತೆ ಕಿರುಕುಳಕ್ಕೆ ಬೇಸತ್ತು ಸೊಸೆ ಆತ್ಮಹತ್ಯೆ ಶಂಕೆ

ಸಾರಾಂಶ

ಕಾಂಗ್ರೆಸ್​ ನಾಯಕಿಯ ಸೊಸೆ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಕುಂಬಾರಕೊಪ್ಪಲು ಬಡಾವಣೆಯಲ್ಲಿ ನಡೆದಿದೆ. ಕಾಂಗ್ರೆಸ್​ ನಾಯಕಿ ರತ್ಮಮ್ಮರವ ಸೊಸೆ ಅಂಬಿಕಾ ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದಕ್ಕೆಲ್ಲ ಅತ್ತೆಯ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎನ್ನುವ ಆರೋಪ ಕೇಳಿಬಂದಿದೆ.

ಮೈಸೂರು(ಜ.24): ಕಾಂಗ್ರೆಸ್​ ನಾಯಕಿಯ ಸೊಸೆ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಕುಂಬಾರಕೊಪ್ಪಲು ಬಡಾವಣೆಯಲ್ಲಿ ನಡೆದಿದೆ. ಕಾಂಗ್ರೆಸ್​ ನಾಯಕಿ ರತ್ಮಮ್ಮರವ ಸೊಸೆ ಅಂಬಿಕಾ ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದಕ್ಕೆಲ್ಲ ಅತ್ತೆಯ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎನ್ನುವ ಆರೋಪ ಕೇಳಿಬಂದಿದೆ.

ಕಳೆದ 6 ತಿಂಗಳ ಹಿಂದೆಷ್ಟೇ ಅಂಬಿಕಾ ಹಾಗೂ ರತ್ಮಮ್ಮ ರವರ ಮಗ ಗುರುನಾಥ್​ ವಿವಾಹ ನಡೆದಿತ್ತು. ಅಲ್ಲದೆ ಗುರುನಾಥ್​ನಿಗೆ ಅಂಬಿಕಾ ಮೂರನೇ ಪತ್ನಿಯಾಗಿದ್ದಳು. ಇನ್ನು ಕಳೆದ ವರ್ಷವಷ್ಟೇ ರಾಜ್ಯ ಸರ್ಕಾರದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪಡೆದಿದ್ದ ರತ್ಮಮ್ಮ ಕಾಂಗ್ರೆಸ್​ ವಲಯದಲ್ಲಿ ಪ್ರಭಾವಿಯಾಗಿದ್ದಳು. ಜೊತೆಗೆ ಸಿಎಂ ಸಿದ್ದರಾಮಯ್ಯನವರು ತನಗೆ ಆಪ್ತರು ಎಂದು ಹೇಳಿಕೊಂಡು ಓಡಾಡುತ್ತಿದ್ದಳು. ಸಿಎಂ ಮನೆಯಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ರತ್ಮಮ್ಮ, ಸೊಸೆಗೆ ವಿಪರೀತ ಕಿರುಕುಳ ನೀಡುತ್ತಿದ್ದಳು ಎನ್ನುವ ಆರೋಪ ಕೇಳಿಬಂದಿದೆ.

ಇದು ಆತ್ಮಹತ್ಯೆಯಲ್ಲ, ವರದಕ್ಷಿಣೆಗಾಗಿ ಅತ್ತೆ ಮತ್ತು ಗಂಡ ಸೇರಿ ಕೊಲೆ ಮಾಡಿದ್ದಾರೆ ಅಂತ ಮೃತಳ ಸಂಬಂಧಿಕರು ಆರೋಪಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವ ತನಕ ಶವ ಇಳಿಸದಂತೆ ಪಟ್ಟು ಹಿಡಿದಿರುವ ಸಂಬಂಧಿಕರು ಪ್ರತಿಭಟನೆಗೆ ಮುಂದಾಗಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜು ಬಂಧನ ಸನ್ನಿಹಿತ: ನಿರೀಕ್ಷಣಾ ಜಾಮೀನು ಅರ್ಜಿ ವಜಾ
ದ್ವೇಷ ಭಾಷಣ ತಡೆ ಕಾಯ್ದೆ ಅಭಿವ್ಯಕ್ತಿ ಸ್ವಾತಂತ್ರ್ಯದ ವಿರುದ್ಧವಲ್ಲ: ಬಿ.ಕೆ.ಹರಿಪ್ರಸಾದ್‌ ಲೇಖನ