ಇತ್ತ ರಾಜಕೀಯ ಹೈಡ್ರಾಮ : ಅತ್ತ ಹಿರಿಯ ಶಾಸಕ ಶಾಮನೂರು ಅಸಮಾಧಾನ

Published : Jul 08, 2019, 02:49 PM IST
ಇತ್ತ ರಾಜಕೀಯ ಹೈಡ್ರಾಮ : ಅತ್ತ ಹಿರಿಯ ಶಾಸಕ ಶಾಮನೂರು ಅಸಮಾಧಾನ

ಸಾರಾಂಶ

ಇತ್ತ ರಾಜಕೀಯ ಹೈ ಡ್ರಾಮ ನಡೆಯುತ್ತಿದ್ದರೆ ಅತ್ತ ಕಾಂಗ್ರೆಸ್ ಹಿರಿಯ ಶಾಸಕ ಪಕ್ಷದ ಮುಖಂಡರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅವರ ಅಸಮಾಧಾನಕ್ಕೆ ಕಾರಣವೇನು?

ದಾವಣಗೆರೆ [ಜು.08] : ರಾಜ್ಯ ರಾಜಕೀಯದಲ್ಲಿ ದೊಡ್ಡ ಹೈ ಡ್ರಾಮಾ ನಡೆಯುತ್ತಿದೆ. ಹಲವು 14 ಶಾಸಕರು ರಾಜೀನಾಮೆ ನೀಡಿದ್ದು, ಹಲವು ಸಚಿವರು ಇದೇ ಹಾದಿ ತುಳಿದಿದ್ದಾರೆ. ಆದರೆ ನನ್ನನ್ನು ಮಾತ್ರ ಬೆಂಗಳೂರಿಗೆ ಬಾ ಎಂದು ಯಾರೂ ಕರೆದಿಲ್ಲ ಎಂದು ಕೈ ಹಿರಿಯ ಶಾಸಕ ಶಾಮನೂರು ಶಿವಸಂಕರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. 

ದಾವಣಗೆರೆಯಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ನಾನು ಬೆಂಗಳೂರಿಗೆ ಹೋಗುವುದಿಲ್ಲ. ಯಾಕೆಂದರೆ ನನ್ನನ್ನು ಯಾರೂ ಕೂಡ ಆಹ್ವಾನಿಸಿಲ್ಲ ಎಂದರು. 

ಸದ್ಯ ಮೈತ್ರಿ ಸರ್ಕಾರ ಏನಾಗುತ್ತದೆ ಎಂದು ಹೇಳಲಾಗುವುದಿಲ್ಲ. ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಎನ್ನುವುದು ಸುಳ್ಳು ಸುದ್ದ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯೇ ಮುಂದುವರಿಯುವ ಸಾಧ್ಯತೆ ಇದೆ ಎಂದು ಶಿವಶಂಕರಪ್ಪ ಹೇಳಿದರು. 

ಇನ್ನು ಸಿಎಂ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಬಗ್ಗೆ ಪದೇ ಪದೇ ತಮ್ಮ ಬಳಿ ಪ್ರಶ್ನೆ  ಮಾಡುವುದನ್ನು ನಿಲ್ಲಿಸಿ ಎಂದು ಈ ವೇಳೆ ಶಿವಶಂಕರಪ್ಪ ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೂಡಿಗೆರೆ: ಮನೆ ಭೋಗ್ಯ ವಿಚಾರಕ್ಕೆ ಜಗಳ, ಮಹಿಳೆಯ ಜಡೆ ಹಿಡಿದು ಎಳೆದು ಬಿಸಾಡಿ ಹಲ್ಲೆ.!
Bengaluru: ಹಾರ್ಟ್‌ ಅಟ್ಯಾಕ್‌ ಆಗಿ ರಸ್ತೆಯಲ್ಲಿ ಬಿದ್ದ ವ್ಯಕ್ತಿ, ಪತ್ನಿಯ ಗೋಳಾಟ ಕೇಳಿಯೂ ನೆರವಿಗೆ ಬಾರದ ಜನ!