
ನವದೆಹಲಿ(ಸೆ.04): ಕಳೆದ ಅಧಿವೇಶನದಲ್ಲಿ ಜಾರಿಗೆ ಬಂದ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ತಿದ್ದುಪಡಿ ಕಾಯ್ದೆ, 2019 ಅನ್ವಯ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸೇರಿದಂತೆ ನಾಲ್ವರನ್ನು ಉಗ್ರ ಪಟ್ಟಿಗೆ ಸೇರಿಸಲಾಗಿದೆ.
ಯುಎಪಿಎ ಕಾಯ್ದೆಯಡಿಯಲ್ಲಿ ದಾವೂದ್ ಇಬ್ರಾಹಿಂ, ಹಫೀಜ್ ಸಯೀದ್, ಜಾಕೀರ್ ಉರ್ ರೆಹಮಾನ್ ಲಖ್ವಿ ಹಾಗೂ ಮಸೂದ್ ಅಜರ್'ನನ್ನು ಉಗ್ರ ಪಟ್ಟಿಗೆ ಸೇರಿಸಲಾಗಿದೆ.
ಈ ಮೊದಲು ಯುಎಪಿಎ ಕಾನೂನಿನಡಿಯಲ್ಲಿ ಕೇವಲ ಸಂಸ್ಥೆ ಅಥವಾ ಸಂಘಟನೆಗಳನ್ನಷ್ಟೇ ಉಗ್ರ ಸಂಘಟನೆಗಳೆಂದು ಘೋಷಿಸಲು ಅವಕಾಶವಿತ್ತು. ಆದರೆ ತಿದ್ದುಪಡಿ ಕಾನೂನಿ ಪ್ರಕಾರ ವ್ಯಕ್ತಿಯನ್ನೂ ಕೂಡ ಉಗ್ರ ಎಂದು ಘೋಷಿಸುವ ಅವಾಕಾಶವಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.