
ದುಬೈ : ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಂಟನೊಬ್ಬನ್ನು ದುಬೈನಿಂದ ಮುಂಬಯಿಗೆ ಕರೆತರಲಾಗುತ್ತಿದೆ.
1993ರ ಮುಂಬೈ ಸ್ಫೋಟದ ಬಳಿಕ ಭಾರತದಿಂದ ಈತ ತಪ್ಪಿಸಿಕೊಂಡು ಪಲಾಯನ ಮಾಡಿದ್ದ ಎನ್ನಲಾಗಿದೆ. ಇಲ್ಲಿಂದ ಪರಾರಿಯಾಗಿದ್ದ ಫಾರೂಕ್ ಟಕ್ಲಾ ವಿರುದ್ಧ 1995ರಲ್ಲಿ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು.
ಈತನನ್ನು ಮುಂಬಯಿಯ ಕರೆತಂದ ಬಳಿಕ ಸಿಬಿಐ ಅಧಿಕಾರಿಗಳು ಈತನನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ. ಬಳಿಕ ತನನ್ನು ಟಾಡಾ ಕೋರ್ಟ್’ಗೆ ಹಾಝರುಪಡಿಸಲಾಗಿತ್ತದೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿದ ಹಿರಿಯ ವಕೀಲರಾದ ಉಜ್ವಲ್ ನಿಕಮ್ ಟಾಕ್ಲಾ ಬಂಧನದಿಂದ ದಾವೂದ್ ಗ್ಯಾಂಗ್’ಗೆ ಬಲವಾದ ಹಿನ್ನಡೆ ಉಂಟಾಗಿದೆ ಎಂದು ಹೇಳಿದ್ದಾರೆ.
ದಾವೂದ್ ಕೂಡ ಭಾರತಕ್ಕೆ ವಾಪಸಾಗಲು ಕೆಲವು ಷರತ್ತುಗಳನ್ನು ಹಾಕಿದ್ದ. ಆದರೆ ಭಾರತ ಸರ್ಕಾರ ಷರತ್ತುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.