
ಚೆನ್ನೈ (ಮೇ. 23): ಪರಿಸರ ಮಾಲಿನ್ಯ ಹೆಚ್ಚಾಗುತ್ತದೆ ಎಂಬ ಕಾರಣದಿಂದ ವೇದಾಂತ ಕಂಪನಿಯ ಸ್ಟೀರ್ಲೈಟ್ ತಾಮ್ರ ಘಟಕವನ್ನು ಸ್ಥಗಿತಗೊಳಿಸಬೇಕೆಂದು ಜನರು ನಡೆಸುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. 11 ಮಂದಿ ಮೃತಪಟ್ಟಿದ್ದಾರೆ.
ತೂತುಕುಡಿಯಲ್ಲಿರುವ ಸ್ಟೆರಾಲೈಟ್ ತಾಮ್ರ ಘಟಕದ ವಿಸ್ತರಣೆಗೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಘಟಕ ವಿಸ್ತರಣೆಗೂ ಮುನ್ನ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಬೇಕೆಂದು ಕೋರ್ಟ್ ಆದೇಶಿಸಿದೆ.
ಚೆನ್ನೈ'ನಿಂದ 600 ಕಿ.ಮೀ ದೂರದಲ್ಲಿರುವ ತೂತುಕುಡಿಯಲ್ಲಿ ಸ್ಟಿರಲೈಟ್ ತಾಮ್ರ ಘಟಕದಿಂದ ಅಂತರ್ಜಲ ಕಲುಷಿತವಾಗುತ್ತಿದೆ ಎಂದು ಕಳೆದ 100 ದಿನಗಳಿಂದ ಘಟಕವನ್ನು ಸ್ಥಗಿತಗೊಳಿಸಬೇಕೆಂದು ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ 11 ಮಂದಿ ಮೃತಪಟ್ಟಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.