ಪರಮೇಶ್ವರ್ ಕ್ಷೇತ್ರದಲ್ಲಿ ಬಡ್ಡಿ ರಹಿತ ಸಾಲ..!

Published : Mar 05, 2018, 12:40 PM ISTUpdated : Apr 11, 2018, 12:48 PM IST
ಪರಮೇಶ್ವರ್ ಕ್ಷೇತ್ರದಲ್ಲಿ ಬಡ್ಡಿ ರಹಿತ ಸಾಲ..!

ಸಾರಾಂಶ

ಗ್ರಾಮ ವಾಸ್ತವ್ಯ, ಮಹಿಳಾ ಸಮಾವೇಶದ ಬಳಿಕ ಕೊರಟಗೆರೆ ಕ್ಷೇತ್ರದ ಮತದಾರರ ಮನವೊಲಿಕೆಗೆ ಬಡ್ಡಿರಹಿತ ಸಾಲದ ಮೂಲಕ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್  ಮುಂದಾಗಿ ರುವಂತಿದೆ.

ಕೊರಟಗೆರೆ: ಗ್ರಾಮ ವಾಸ್ತವ್ಯ, ಮಹಿಳಾ ಸಮಾವೇಶದ ಬಳಿಕ ಕೊರಟಗೆರೆ ಕ್ಷೇತ್ರದ ಮತದಾರರ ಮನವೊಲಿಕೆಗೆ ಬಡ್ಡಿರಹಿತ ಸಾಲದ ಮೂಲಕ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್  ಮುಂದಾಗಿ ರುವಂತಿದೆ.

ಪರಂ ಅವರಿಗೆ ಮಧುಗಿರಿ ಶಾಸಕ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಸಾಥ್ ನೀಡಿದ್ದಾರೆ. ಭಾನುವಾರ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, 553 ಸ್ವಸಹಾಯ ಗುಂಪು ಮತ್ತು 5932 ರೈತ ಕುಟುಂಬಕ್ಕೆ ತುಮಕೂರು ಡಿಸಿಸಿ ಬ್ಯಾಂಕಿನಿಂದ 4.9 ಕೋಟಿ ರು. ಬಡ್ಡಿ ರಹಿತ ಸಾಲ ವಿತರಿಸಿದ ಪರಮೇಶ್ವರ್, ರಾಜ್ಯದ ಮಹಿಳೆಯರು ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಸ್ವಾವಲಂಬಿಯಾಗುವ ಮೂಲಕ ಆರ್ಥಿಕ ಸದೃಢರಾಗಬೇಕು ಎಂದರು.

ಶಾಸಕ ರಾಜಣ್ಣ ಮಾತನಾಡಿ, ಡಿಸಿಸಿ ಬ್ಯಾಂಕ್‌ನ ಮೂಲಕ ನಾವು ಪಕ್ಷದ ಪರ ರಾಜಕೀಯವನ್ನೂ ಮಾಡ್ತೀವಿ. ರೈತರಿಗೆ ಸಾಲದ ರೂಪದಲ್ಲಿ ಅನುಕೂಲವನ್ನೂ ಮಾಡಿಕೊಡ್ತೀವಿ.

ಡಿಸಿಸಿ ಬ್ಯಾಂಕ್‌ನಲ್ಲಿ ಒಂದು ಪೈಸೆಯೂ ಸಹ ಸರ್ಕಾರದ ಹಣವಿಲ್ಲ. ಸಾರ್ವಜನಿಕರ ಹಣವನ್ನು ನಮ್ಮ ಸ್ವಾರ್ಥಕ್ಕಾಗಿ ಬಳುಸುತ್ತಿಲ್ಲ ಎಂದರು. ವಿಡೀಯೋ ವೈರಲ್: ಕಾರ್ಯಕ್ರಮ ಮುಕ್ತಾಯವಾದ ನಂತರ ಕೆಲ ಮುಖಂಡರು ಸಮಾರಂಭಕ್ಕೆ ಬಂದಿದ್ದ ಮಹಿಳೆಯರಿಗೆ ರಾಜಾರೋಷವಾಗಿ ಹಣ ಹಂಚುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?