ಐವರು ಶಾಸಕರ ಉಳಿಸಲು ಪರಮೇಶ್ವರ್ ಔಟ್?

Published : Jul 08, 2019, 09:56 AM ISTUpdated : Jul 08, 2019, 10:03 AM IST
ಐವರು ಶಾಸಕರ ಉಳಿಸಲು ಪರಮೇಶ್ವರ್ ಔಟ್?

ಸಾರಾಂಶ

ರಾಜೀನಾಮೆ ನೀಡಿದ ಐವರು ಶಾಸಕರ ನಿರ್ಧಾರ ಬದಲಾಯಿಸುವ ನಿಟ್ಟಿನಲ್ಲಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಪರಮೇಶ್ವರ್ ಅವರನ್ನು ಬದಲಾಯಿಸುವ ಚರ್ಚೆ ನಡೆದಿದೆ. 

ಬೆಂಗಳೂರು[ಜು.08] :  ಮುಂಬೈನಲ್ಲಿ ನೆಲೆಗೊಂಡಿರುವವರು ಸೇರಿದಂತೆ ಐವರು ಅತೃಪ್ತ ಶಾಸಕರು ತಮ್ಮ ನಿರ್ಧಾರವನ್ನು ಬದಲಾಯಿಸುವ ಸಾಧ್ಯತೆಯಿದೆ ಎಂದೇ ನಂಬಿರುವ ಕಾಂಗ್ರೆಸ್ ನಾಯಕತ್ವ, ಈ ಶಾಸಕರ ಪ್ರಮುಖ ಬೇಡಿಕೆಯಾದ ಬೆಂಗಳೂರು ನಗರಾಭಿವೃದ್ಧಿ ಸಚಿವ ಸ್ಥಾನದಿಂದ ಪರಮೇಶ್ವರ್ ಅವರನ್ನು ಬದಲಾಯಿಸುವ ದಿಸೆಯಲ್ಲೂ ಗಂಭೀರ ಚಿಂತನೆ ನಡೆಸಿದೆ.

ಮೂಲಗಳ ಪ್ರಕಾರ ಪರಮೇಶ್ವರ್ ಅವರನ್ನು ಬೆಂಗಳೂರು ನಗರ ಉಸ್ತುವಾರಿಯಿಂದ ಬದಲಾಯಿಸುವುದು ಹಾಗೂ ಸಚಿವ ಕೃಷ್ಣ ಬೈರೇಗೌಡ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಪಡೆದರೆ ಈ ಐವರು ತಮ್ಮ ನಿರ್ಧಾರ ಬದಲಿಸಬಹುದು ಎಂದ ಚಿಂತನೆ ಕಾಂಗ್ರೆಸ್ ನಾಯಕರಲ್ಲಿದೆ. ಮೂಲಗಳ ಪ್ರಕಾರ ಇದಲ್ಲದೆ, ಹಿರಿಯ ನಾಯಕ  ರಾಮಲಿಂಗಾರೆಡ್ಡಿ ಅವರು ಬೆಂಗಳೂರು ಉಸ್ತುವಾರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಪರಮೇಶ್ವರ್ ಅವರನ್ನು ಬದಲಾಯಿಸಬೇಕು ಮತ್ತು ಕೃಷ್ಣ ಬೈರೇಗೌಡರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಪಡೆಯಬೇಕು ಎಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. 

ಈ ಬೇಡಿಕೆ ಈಡೇರಿದರೆ ಐವರು ಅತೃಪ್ತರು (ರಾಜೀನಾಮೆ ನೀಡಿರುವ ಎಸ್.ಟಿ. ಸೋಮಶೇಖರ್, ಮುನಿರತ್ನ, ಬೈರತಿ ಬಸವರಾಜು, ರಾಮಲಿಂಗಾರೆಡ್ಡಿ ಮತ್ತು ಸೋಮವಾರ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿರುವ ಸೌಮ್ಯ ರೆಡ್ಡಿ) ತಮ್ಮ ನಿರ್ಧಾರಗಳಿಂದ ಹಿಂದಕ್ಕೆ ಸರಿಯುವ ಸಾಧ್ಯತೆಯಿದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!