ಚುನಾವಣಾ ಹೊಸ್ತಿಲಲ್ಲಿ ಸಿಎಂಗೆ ಎದುರಾಗಿದೆ ಭೂ ಕಂಟಕ?

Published : Dec 25, 2017, 02:30 PM ISTUpdated : Apr 11, 2018, 12:59 PM IST
ಚುನಾವಣಾ ಹೊಸ್ತಿಲಲ್ಲಿ ಸಿಎಂಗೆ ಎದುರಾಗಿದೆ ಭೂ ಕಂಟಕ?

ಸಾರಾಂಶ

ಚುನಾವಣೆ ಹೊಸ್ತಿಲಲ್ಲಿ ಸಿಎಂ ಸಿದ್ದರಾಮಯ್ಯಗೆ ಭೂ ಕಂಟಕ ಎದುರಾಗಿದೆ. ಸಿಎಂ ವಿರುದ್ಧ ಡಿನೋಟಿಫಿಕೇಶನ್ ಆರೋಪ ಕೇಳಿ ಬಂದಿದೆ.

ಬೆಂಗಳೂರು (ಡಿ.25): ಚುನಾವಣೆ ಹೊಸ್ತಿಲಲ್ಲಿ ಸಿಎಂ ಸಿದ್ದರಾಮಯ್ಯಗೆ ಭೂ ಕಂಟಕ ಎದುರಾಗಿದೆ. ಸಿಎಂ ವಿರುದ್ಧ ಡಿನೋಟಿಫಿಕೇಶನ್ ಆರೋಪ ಕೇಳಿ ಬಂದಿದೆ.

ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವಡೇಕರ್ ರಾಜ್ಯಪಾಲರನ್ನು ಭೇಟಿ ಮಾಡಿದ್ದು ಕಾಂಗ್ರೆಸ್ ನಾಯಕರಿಗೆ ನಡುಕ ಉಂಟಾಗಿದೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್'ಗೆ ಬಿಜೆಪಿ ಅನುಮತಿ ಕೋರಿದೆ.   

ಇದರ ಬೆನ್ನಲ್ಲೇ ದಿನೇಶ್ ಗುಂಡೂರಾವ್, ಹಾಗೂ ವಿ ಎಸ್ ಉಗ್ರಪ್ಪ ಸುದ್ದಿಗೋಷ್ಠಿ  ನಡೆಸಿದ್ದಾರೆ.

ರಾಜ್ಯಪಾಲರು ಬಿಜೆಪಿಯ ಒತ್ತಡಕ್ಕೆ ಮಣಿಯಬಾರದು. ಬಿಜೆಪಿ ನಾಯಕರು ಗೂಬೆ ಕೂರಿಸಲು ಯತ್ನಿಸುತ್ತಿದ್ದಾರೆ.  ರಾಜ್ಯಪಾಲರು ಈ ರೀತಿಯ ಸುಳ್ಳು ಆರೋಪಿಗಳನ್ನು ನಂಬಲೇಬಾರದು.  ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಇಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬಿಜೆಪಿ ರಾಜಭವನವನ್ನು  ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜ್ಯಪಾಲರು ಒತ್ತಡಕ್ಕೆ ಮಣಿಯಬಾರದು. ಒಮ್ಮೆ ಅನುಮತಿ ಕೊಟ್ಟರೆ ಅದು ದುರುದ್ದೇಶ ಆಗುತ್ತದೆ. ಆಧಾರ ರಹಿತ ಆರೋಪಕ್ಕೆ ಮಣೆ ಹಾಕಬಾರದು ಎಂದು ಉಗ್ರಪ್ಪ ಹೇಳಿದ್ದಾರೆ.

 

 

 

 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!