
ನವದೆಹಲಿ : ಭಾರತದಲ್ಲಿ ಭಾರೀ ಹವಾಮಾನ ವೈಪರೀತ್ಯ ಸಂಭವಿಸಲಿದ್ದು, ಬಿಸಿ ಗಾಳಿ ಬೀಸಲಿದೆ ಎಂದು ವರದಿಯೊಂದು ಹೇಳಿದೆ.
ಕಳೆದ 2015ನೇ ಇಸವಿಯಲ್ಲಿಯೂ ಕೂಡ ದೇಶದಲ್ಲಿ ಬಿಸಿ ಗಾಳಿ ಬೀಸಿ 2500 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ಬಾರಿಯೂ ಕೂಡ ಅದೇ ರೀತಿ ಭಾರತದಲ್ಲಿ ಬಿಸಿ ಮಾರುತಗಳು ಅಪ್ಪಳಿಸಲಿವೆ ಎಂದು ಎಚ್ಚರಿಕೆ ನೀಡಲಾಗಿದೆ.
ಇಂಟರ್ ಗವರ್ನಮೆಂಟಲ್ ಪ್ಯಾನಲ್ ಕ್ಲೈಮೇಟ್ ಚೇಂಜ್ ಈ ಬಗ್ಗೆ ವರದಿಯನ್ನು ನೀಡಿದೆ.
ಸೋಮವಾರ ಈ ಬಗ್ಗೆ ವರದಿಯನ್ನು ಬಿಡುಗಡೆ ಮಾಡಲಾಗಿದ್ದು ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಇನ್ನು ಇದೇ ವೇಳೆ ಸರ್ಕಾರ ಪ್ಯಾರೀಸ್ ಒಪ್ಪಂದದ ಬಗ್ಗೆ ಪುನರ್ ಪರಿಶೀಲನೆ ಮಾಡಲಾಗುತ್ತಿದೆ.
ಶೇ.2 ಡಿಗ್ರಿಯಷ್ಟು ತಾಪಮಾನವು ಹೆಚ್ಚಳವಾಗಿ ಸಮಸ್ಯೆ ಉಂಟು ಮಾಡುವ ಸಾಧ್ಯತೆಗಳಿದೆ ಎಂದು ಹೇಳಲಾಗಿದೆ.
ತಾಪಮಾನ ಏರಿಕೆಯು ಎಚ್ಚರಿಕೆಯ ಕರೆಗಂಟೆಯಾಗಿದ್ದು ಈ ಬಗ್ಗೆ ಎಚ್ಚೆತ್ತುಕೊಳ್ಳದಿದ್ದಲ್ಲಿ 2030ರ ವೇಳೆ ಬದುಕಲು ಅಸಾಧ್ಯವಾಗುವಷ್ಟು ತಾಪಮಾನವು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇನ್ನು ಐಪಿಸಿಸಿ ಪ್ರಮುಖವಾಗಿ ಭಾರತದ ಪ್ರಮುಖ ನಗಳಿಗೆ ಈ ಬಗ್ಗೆ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.