
ನವದೆಹಲಿ(ಮಾ.13): ಮರಣ ದಂಡನೆ ಶಿಕ್ಷೆ ನಿಷೇಧಿಸುವ ಕುರಿತ ಕೇಂದ್ರ ಸರ್ಕಾರದ ಪ್ರಸ್ತಾಪಕ್ಕೆ ಕರ್ನಾಟಕ ಬೆಂಬಲ ವ್ಯಕ್ತಪಡಿಸಿದೆ. ಆದರೆ ಕೇಂದ್ರಕ್ಕೆ ಹೀಗೆ ತಮ್ಮ ಅಭಿಪ್ರಾಯ ಸಲ್ಲಿಕೆ ಮಾಡಿರುವ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೈಕಿ 12 ರಾಜ್ಯಗಳು ಮರಣದಂಡನೆ ವಿಧಿಸುವ ಪದ್ದತಿ ಉಳಿಸಿಕೊಳ್ಳಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿವೆ.
ನ್ಯಾ.ಎ.ಪಿ.ಶಾ ನೇತೃತ್ವದ ಕಾನೂನು ಆಯೋಗವು, 2015ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ತನ್ನ ವರದಿಯಲ್ಲಿ ಭಯೋತ್ಪಾದನೆ ಮತ್ತು ದೇಶದ ವಿರುದ್ಧ ಸಮರ ಸಾರುವವರು ಹೊರತುಪಡಿಸಿ ಉಳಿದ ಯಾವುದೇ ಪ್ರಕರಣದ ದೋಷಿಗಳಿಗೂ ಮರಣದಂಡನೆ ವಿಧಿಸಬಾರದು. ಇಂಥ ಪದ್ದತಿ ಕೈಬಿಡಬೇಕೆಂದು ಶಿಫಾರಸು ಮಾಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಭಿಪ್ರಾಯ ಕೋರಿತ್ತು.
ಈ ಕೋರಿಕೆ ಸಂಬಂಧ ಇದುವರೆಗೆ 14 ರಾಜ್ಯಗಳು ಮಾತ್ರವೇ ಕೇಂದ್ರಕ್ಕೆ ಉತ್ತರ ನೀಡಿವೆ. ಈ ಪೈಕಿ ಗುಜರಾತ್, ಮಧ್ಯಪ್ರದೇಶ, ಛತ್ತೀಸ್ಗಡ, ರಾಜಸ್ಥಾನ, ಬಿಹಾರ, ಜಾರ್ಖಂಡ್, ತಮಿಳುನಾಡು ಮತ್ತು ದೆಹಲಿ ರಾಜ್ಯಗಳು ಮರಣ ದಂಡನೆ ಉಳಿಯಬೇಕೆಂದು ಪ್ರತಿಪಾದಿಸಿವೆ. ಮರಣ ದಂಡನೆಯಿರುವುದರಿಂದ, ಕೊಲೆ ಮತ್ತು ಅತ್ಯಾಚಾರದಂತಹ ಪ್ರಕರಣಗಳಿಗೆ ತಡೆಯೊಡ್ಡಬಹುದು ಎಂದು 12 ರಾಜ್ಯಗಳು ಪ್ರತಿಪಾದಿಸಿವೆ. ಆದರೆ ಕರ್ನಾಟಕ ಮತ್ತು ತ್ರಿಪುರ ರಾಜ್ಯಗಳ ಶಿಕ್ಷೆ ಪ್ರಕಟಿಸುವುದಕ್ಕೆ ವಿರೋಧ ವ್ಯಕ್ತಪಡಿಸಿವೆ. ಆದರೆ ತ್ರಿಪುರದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಆ ರಾಜ್ಯದ ಅಭಿಪ್ರಾಯ ಬದಲಾಗಬಹುದು ಎಂಬ ವಾದವೂ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.